ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…