ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…