ಬದಿಯಡ್ಕದ ದಂತ ವೈದ್ಯ ಡಾ.ಕೃಷ್ಣಮೂರ್ತಿ ಅವರ ನಿಗೂಡ ಸಾವಿನ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬದಿಯಡ್ಕದಲ್ಲಿ ವಿಶ್ವ ಹಿಂದು ಪರಿಷತ್ ಆಶ್ರಯದಲ್ಲಿ ಬದಿಯಡ್ಕ ಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಘಟನೆಗೆ ಕಾರಣವಾದ ಎಲ್ಲಾ ಶಕ್ತಿಗಳನ್ನೂ ಬಂಧಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಮನೆಯ ಪರಿಸರದಿಂದ ಹೊರಟ ಬೃಹತ್ ಮೆರವಣಿಗೆಯು ಬದಿಯಡ್ಕ ಪೇಟೆಯಲ್ಲಿ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಂಘ ಪರಿವಾರ ನೇತಾರರಾದ ಶರಣ್ ಪಂಪ್ ವೆಲ್, ನ್ಯಾಯವಾದಿ ಕೆ.ಶ್ರೀಕಾಂತ್, ಪಿ.ರಮೇಶ್ ಕಾಸರಗೋಡು, ಸುಧಾಮ ಗೋಸಾಡ, ಹರೀಶ್ ನಾರಂಪಾಡಿ ಮೊದಲಾದವರು ಮಾತನಾಡಿದರು.
ವಿಶ್ವ ಹಿಂದು ಪರಿಷತ್ ಪ್ರಖಂಡ ಕಾರ್ಯದರ್ಶಿ ಮಂಜುನಾಥ ಮಾನ್ಯ ಸ್ವಾಗತಿಸಿದರು. ಹರೀಶ್ ಪುತ್ರಕಳ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…