ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

May 5, 2025
12:21 PM

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ ವೇಳೆಯಲ್ಲಿ  ವಿಶೇಷ ಧಾರ್ಮಿಕ  ಕೈಂಕರ್ಯಗಳೊಂದಿಗೆ  ದೇವಾಲಯದ ದ್ವಾರವನ್ನು ತೆರೆಯಲಾಗಿದೆ. ಚಮೋಲಿ ಜಿಲ್ಲೆಯಲ್ಲಿರುವ  ಬದರೀನಾಥ ಧಾಮಕ್ಕೆ ಮೊದಲು ಉದ್ಧವ , ಗರುಡ ಹಾಗೂ ಆದಿಗುರು ಶಂಕರಾಚಾರ್ಯರ  ಪ್ರತಿಮೆಗಳನ್ನು  ಉತ್ಸವದಲ್ಲಿ  ದೇಗುಲಕ್ಕೆ ತರಲಾಯಿತು. ಇದೇ ವೇಳೆ  ಭಾಮನಿ ಗ್ರಾಮದಲ್ಲಿದ್ದ ಕುಬೇರ ಮತ್ತು ನಂದಾದೇವಿಯ ಉತ್ಸವ ಮೂರ್ತಿಗಳನ್ನು  ಸಹ  ದೇಗುಲಕ್ಕೆ ತರಲಾಗಿದ್ದು,  ರಾತ್ರಿಯವರೆಗೂ  ಬದರೀನಾಥ ದೇಗುಲದಲ್ಲಿ ಪೂಜೆ ನಡೆಯಿತು. ಬದರೀನಾಥ, ಕೇದಾರನಾಥ ದೇವಾಲಯ ಸಮಿತಿಯು ಇಡೀ ದೇವಾಲಯವನ್ನು 15 ಕ್ವಿಂಟಾಲ್ ಹೂಗಳಿಂದ ಅಲಂಕರಿಸಿದ್ದು,  ಭಾರೀ ಪ್ರಮಾಣದಲ್ಲಿ  ಭಕ್ತರು  ದರ್ಶನಕ್ಕಾಗಿ ಆಗಮಿಸಿದ್ದಾರೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ  ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಹಾಗೂ  ಸುರಕ್ಷತೆಗಾಗಿ  ಅರೆಸೇನಾ ಪಡೆಗಳನ್ನು ನಿಯೋಜಿಸಿದೆ.

Advertisement
Advertisement

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group