ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

May 5, 2025
12:21 PM

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ ವೇಳೆಯಲ್ಲಿ  ವಿಶೇಷ ಧಾರ್ಮಿಕ  ಕೈಂಕರ್ಯಗಳೊಂದಿಗೆ  ದೇವಾಲಯದ ದ್ವಾರವನ್ನು ತೆರೆಯಲಾಗಿದೆ. ಚಮೋಲಿ ಜಿಲ್ಲೆಯಲ್ಲಿರುವ  ಬದರೀನಾಥ ಧಾಮಕ್ಕೆ ಮೊದಲು ಉದ್ಧವ , ಗರುಡ ಹಾಗೂ ಆದಿಗುರು ಶಂಕರಾಚಾರ್ಯರ  ಪ್ರತಿಮೆಗಳನ್ನು  ಉತ್ಸವದಲ್ಲಿ  ದೇಗುಲಕ್ಕೆ ತರಲಾಯಿತು. ಇದೇ ವೇಳೆ  ಭಾಮನಿ ಗ್ರಾಮದಲ್ಲಿದ್ದ ಕುಬೇರ ಮತ್ತು ನಂದಾದೇವಿಯ ಉತ್ಸವ ಮೂರ್ತಿಗಳನ್ನು  ಸಹ  ದೇಗುಲಕ್ಕೆ ತರಲಾಗಿದ್ದು,  ರಾತ್ರಿಯವರೆಗೂ  ಬದರೀನಾಥ ದೇಗುಲದಲ್ಲಿ ಪೂಜೆ ನಡೆಯಿತು. ಬದರೀನಾಥ, ಕೇದಾರನಾಥ ದೇವಾಲಯ ಸಮಿತಿಯು ಇಡೀ ದೇವಾಲಯವನ್ನು 15 ಕ್ವಿಂಟಾಲ್ ಹೂಗಳಿಂದ ಅಲಂಕರಿಸಿದ್ದು,  ಭಾರೀ ಪ್ರಮಾಣದಲ್ಲಿ  ಭಕ್ತರು  ದರ್ಶನಕ್ಕಾಗಿ ಆಗಮಿಸಿದ್ದಾರೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ  ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಹಾಗೂ  ಸುರಕ್ಷತೆಗಾಗಿ  ಅರೆಸೇನಾ ಪಡೆಗಳನ್ನು ನಿಯೋಜಿಸಿದೆ.

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror