ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

May 5, 2025
12:21 PM

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ ವೇಳೆಯಲ್ಲಿ  ವಿಶೇಷ ಧಾರ್ಮಿಕ  ಕೈಂಕರ್ಯಗಳೊಂದಿಗೆ  ದೇವಾಲಯದ ದ್ವಾರವನ್ನು ತೆರೆಯಲಾಗಿದೆ. ಚಮೋಲಿ ಜಿಲ್ಲೆಯಲ್ಲಿರುವ  ಬದರೀನಾಥ ಧಾಮಕ್ಕೆ ಮೊದಲು ಉದ್ಧವ , ಗರುಡ ಹಾಗೂ ಆದಿಗುರು ಶಂಕರಾಚಾರ್ಯರ  ಪ್ರತಿಮೆಗಳನ್ನು  ಉತ್ಸವದಲ್ಲಿ  ದೇಗುಲಕ್ಕೆ ತರಲಾಯಿತು. ಇದೇ ವೇಳೆ  ಭಾಮನಿ ಗ್ರಾಮದಲ್ಲಿದ್ದ ಕುಬೇರ ಮತ್ತು ನಂದಾದೇವಿಯ ಉತ್ಸವ ಮೂರ್ತಿಗಳನ್ನು  ಸಹ  ದೇಗುಲಕ್ಕೆ ತರಲಾಗಿದ್ದು,  ರಾತ್ರಿಯವರೆಗೂ  ಬದರೀನಾಥ ದೇಗುಲದಲ್ಲಿ ಪೂಜೆ ನಡೆಯಿತು. ಬದರೀನಾಥ, ಕೇದಾರನಾಥ ದೇವಾಲಯ ಸಮಿತಿಯು ಇಡೀ ದೇವಾಲಯವನ್ನು 15 ಕ್ವಿಂಟಾಲ್ ಹೂಗಳಿಂದ ಅಲಂಕರಿಸಿದ್ದು,  ಭಾರೀ ಪ್ರಮಾಣದಲ್ಲಿ  ಭಕ್ತರು  ದರ್ಶನಕ್ಕಾಗಿ ಆಗಮಿಸಿದ್ದಾರೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ  ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಹಾಗೂ  ಸುರಕ್ಷತೆಗಾಗಿ  ಅರೆಸೇನಾ ಪಡೆಗಳನ್ನು ನಿಯೋಜಿಸಿದೆ.

“ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror