ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ ವೇಳೆಯಲ್ಲಿ ವಿಶೇಷ ಧಾರ್ಮಿಕ ಕೈಂಕರ್ಯಗಳೊಂದಿಗೆ ದೇವಾಲಯದ ದ್ವಾರವನ್ನು ತೆರೆಯಲಾಗಿದೆ. ಚಮೋಲಿ ಜಿಲ್ಲೆಯಲ್ಲಿರುವ ಬದರೀನಾಥ ಧಾಮಕ್ಕೆ ಮೊದಲು ಉದ್ಧವ , ಗರುಡ ಹಾಗೂ ಆದಿಗುರು ಶಂಕರಾಚಾರ್ಯರ ಪ್ರತಿಮೆಗಳನ್ನು ಉತ್ಸವದಲ್ಲಿ ದೇಗುಲಕ್ಕೆ ತರಲಾಯಿತು. ಇದೇ ವೇಳೆ ಭಾಮನಿ ಗ್ರಾಮದಲ್ಲಿದ್ದ ಕುಬೇರ ಮತ್ತು ನಂದಾದೇವಿಯ ಉತ್ಸವ ಮೂರ್ತಿಗಳನ್ನು ಸಹ ದೇಗುಲಕ್ಕೆ ತರಲಾಗಿದ್ದು, ರಾತ್ರಿಯವರೆಗೂ ಬದರೀನಾಥ ದೇಗುಲದಲ್ಲಿ ಪೂಜೆ ನಡೆಯಿತು. ಬದರೀನಾಥ, ಕೇದಾರನಾಥ ದೇವಾಲಯ ಸಮಿತಿಯು ಇಡೀ ದೇವಾಲಯವನ್ನು 15 ಕ್ವಿಂಟಾಲ್ ಹೂಗಳಿಂದ ಅಲಂಕರಿಸಿದ್ದು, ಭಾರೀ ಪ್ರಮಾಣದಲ್ಲಿ ಭಕ್ತರು ದರ್ಶನಕ್ಕಾಗಿ ಆಗಮಿಸಿದ್ದಾರೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಹಾಗೂ ಸುರಕ್ಷತೆಗಾಗಿ ಅರೆಸೇನಾ ಪಡೆಗಳನ್ನು ನಿಯೋಜಿಸಿದೆ.
“ದ ರೂರಲ್ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…