ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ ವೇಳೆಯಲ್ಲಿ ವಿಶೇಷ ಧಾರ್ಮಿಕ ಕೈಂಕರ್ಯಗಳೊಂದಿಗೆ ದೇವಾಲಯದ ದ್ವಾರವನ್ನು ತೆರೆಯಲಾಗಿದೆ. ಚಮೋಲಿ ಜಿಲ್ಲೆಯಲ್ಲಿರುವ ಬದರೀನಾಥ ಧಾಮಕ್ಕೆ ಮೊದಲು ಉದ್ಧವ , ಗರುಡ ಹಾಗೂ ಆದಿಗುರು ಶಂಕರಾಚಾರ್ಯರ ಪ್ರತಿಮೆಗಳನ್ನು ಉತ್ಸವದಲ್ಲಿ ದೇಗುಲಕ್ಕೆ ತರಲಾಯಿತು. ಇದೇ ವೇಳೆ ಭಾಮನಿ ಗ್ರಾಮದಲ್ಲಿದ್ದ ಕುಬೇರ ಮತ್ತು ನಂದಾದೇವಿಯ ಉತ್ಸವ ಮೂರ್ತಿಗಳನ್ನು ಸಹ ದೇಗುಲಕ್ಕೆ ತರಲಾಗಿದ್ದು, ರಾತ್ರಿಯವರೆಗೂ ಬದರೀನಾಥ ದೇಗುಲದಲ್ಲಿ ಪೂಜೆ ನಡೆಯಿತು. ಬದರೀನಾಥ, ಕೇದಾರನಾಥ ದೇವಾಲಯ ಸಮಿತಿಯು ಇಡೀ ದೇವಾಲಯವನ್ನು 15 ಕ್ವಿಂಟಾಲ್ ಹೂಗಳಿಂದ ಅಲಂಕರಿಸಿದ್ದು, ಭಾರೀ ಪ್ರಮಾಣದಲ್ಲಿ ಭಕ್ತರು ದರ್ಶನಕ್ಕಾಗಿ ಆಗಮಿಸಿದ್ದಾರೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತವು ಎಲ್ಲ ವ್ಯವಸ್ಥೆಗಳನ್ನು ಹಾಗೂ ಸುರಕ್ಷತೆಗಾಗಿ ಅರೆಸೇನಾ ಪಡೆಗಳನ್ನು ನಿಯೋಜಿಸಿದೆ.
“ದ ರೂರಲ್ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿರಿ..
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…