ನಮ್ಮಲ್ಲೂ ಇನ್ಫೋಸಿಸ್(Infosys) ಪ್ರತಿಷ್ಠಾನದವರ ಪ್ರಾಯೋಜಕತ್ಚದ ಸಿಸ್ಟಿಮಾ ಕಂಪನಿಯ(Sistema Company) ಬ್ಯಾಗ್ ಬಯೋ ಗ್ಯಾಸ್(Bag Bio gas) ಸ್ಥಾವರವಿದೆ. ನಮ್ಮಲ್ಲಿ ಸಿಸ್ಟಿಮಾ ಕಂಪನಿಯು ಬಯೋ ಗ್ಯಾಸ್ ಸ್ಥಾವರ ಸ್ಥಾಪಿಸಿ ಹೋಗಿ ಒಂದು ವರ್ಷದ ತನಕ ಸಮಾಧಾನಕರವಾಗಿ ಗ್ಯಾಸ್ ಉತ್ಪತ್ತಿಯಾಗುತ್ತಿರಲಿಲ್ಲ. ಕೊನೆಗೆ ಸಿಸ್ಟಿಮಾದ ಅಧಿಕಾರಿಗಳು ಬಂದು ಬ್ಯಾಗ್ ನೊಳಗಿದ್ದ ಐದಾರು ಸಾವಿರ ಲೀಟರ್ ಅಮೂಲ್ಯ ಸ್ಲರಿಯನ್ನು(Slurry) ಗುಡ್ಡಕ್ಕೆ ಬಿಟ್ಟು ಹೋದರು. “ಗ್ಯಾಸ್(Gas) ಬರಲಿಲ್ಲ…!!!”… ಯಾಕೆ ಗ್ಯಾಸ್ ಉತ್ಪತ್ತಿ ಯಾಗುತ್ತಿಲ್ಲ ಎಂಬ ಪ್ರಶ್ನೆ ಗೆ ಯಾರಲ್ಲೂ ಉತ್ತರವಿರಲಿಲ್ಲ…!!!
ಮಲೆನಾಡು ಕರಾವಳಿಯ ಭಾಗದಲ್ಲಿ ” ಅರ್ಧ ನೆಲದೊಳಗಿನ ಅರ್ಧ ಹೊರಗಿರುವಂತೆ ಈ ಗ್ಯಾಸ್ ಬ್ಯಾಗ್ ಸ್ಥಾಪಿಸಿದರೆ ಮಳೆಗಾಲದಲ್ಲಿ ತೃಪ್ತಿಕರವಾಗಿ ಗ್ಯಾಸ್ ಉತ್ಪತ್ತಿಯಾಗೋಲ್ಲ…!! ಸಂಸ್ಥೆಯ ಮುಖ್ಯಾಧಿಕಾರಿಯೊಬ್ಬರ ಬಳಿ ಮಾತನಾಡಿದರೆ ಅವರು ಅಸಂಬದ್ಧವಾಗಿ ವಾದ ಮಾಡಿದರು. ಮಲೆನಾಡು ಕರಾವಳಿ ಪ್ರದೇಶದಲ್ಲಿ ಈ ಬ್ಯಾಗ್ ಸ್ಥಾವರವನ್ನು ನೆಲಮಟ್ಟದಿಂದ ಕನಿಷ್ಠ ಎರಡು ಅಡಿ ಎತ್ತರ ತಳಪಾಯ ಮಾಡಿ ಅದರ ಮೇಲೆ ಪ್ಲಾಂಟ್ ಸ್ಥಾಪಿಸಿ. ದಯವಿಟ್ಟು ಯಾರೂ ನೆಲದೊಳಗೆ ಈ ಪ್ಲಾಂಟ್ ಸ್ಥಾಪಿಸಬೇಡಿ. ಮತ್ತೆ ಮಳೆಗಾಲದಲ್ಲಿ ದಯವಿಟ್ಟು ಇಡೀ ಸ್ಥಾವರವನ್ನು ಮಳೆ ನೀರು ತಾಕದಂತೆ ಮುಚ್ಚಿ… ಮಲೆನಾಡು ಕರಾವಳಿಯಲ್ಲಿ ಈ ಪ್ಲಾಂಟ್ ಗೆ ಶಾಶ್ವತವಾಗಿ ಮಾಡನ್ನ ಮಾಡಿದರೂ ಉತ್ತಮ…
ದಿನಕ್ಕೆ ಎರಡು ಬುಟ್ಟಿ ಹಸಿ ಫ್ರೆಶ್ ಸಗಣಿಯನ್ನು ಸುಮಾರು ಅರವತ್ತು ಲೀಟರ್ ನೀರಿನೊಂದಿಗೆ ಚೆನ್ನಾಗಿ ಕರಡಿ ಸ್ಥಾವರದೊಳಕ್ಕೆ ಬಿಡಬೇಕು. ಸ್ಲರಿ ಸಾಕಷ್ಟು ತೆಳ್ಳಗೇ ಇರಲಿ … ಸ್ಲರಿ ಹೊಂಡ ಇಳಿಜಾರಿನಲ್ಲಿರಲಿ.. ಮೂರು ನಾಲ್ಕು ದಿನಕ್ಕೊಮ್ಮೆ ನಮ್ಮಲ್ಲಿ ಸ್ಲರಿ ಹೊರಬರುತ್ತದೆ. ಈ ಕಾರಣಕ್ಕೆ ಗೋಏರ್ ಗ್ಯಾಸ್ ಸ್ಥಾವರಕ್ಕಿಂತ ತಗ್ಗಿನಲ್ಲಿ ಸ್ಲರಿ ಹೊಂಡ ಇರದಿದ್ದರೆ ಸ್ಲರಿ ಹೊರಕ್ಕೆ ಚೆಲ್ಲಿ ವ್ಯರ್ಥವಾಗುತ್ತದೆ. ಇದು ನಮ್ಮ ಸ್ವಂತ ಅನುಭವ…
ಸಿಸ್ಟಿಮಾ ಕಂಪನಿಯ ಒಲೆ ಖಂಡಿತವಾಗಿಯೂ ಗುಣಮಟ್ಟದ್ದಲ್ಲ. ನಮ್ಮ ಮನೆಯಲ್ಲಿ ಇಪ್ಪತ್ತೈದು ವರ್ಷಗಳ ಹಿಂದೆ ಹೆಚ್ ಪಿ ಗ್ಯಾಸ್ ಸಂಪರ್ಕ ಪಡೆದಾಗ ಆ ಗ್ಯಾಸ್ ಸಂಪರ್ಕದೊಂದಿಗೆ ನಮ್ಮಲ್ಲಿ ಹೆಚ್ ಪಿ ಸಂಸ್ಥೆ ನೀಡಿದ ಅಕೈ ಕಂಪನಿಯ ಒಲೆ ಇಂದಿಗೂ ಕೆಲವು ಚಿಕ್ಕ ಪುಟ್ಟ ರಿಪೇರಿಯೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದೆ. ಆದರೆ ಸಿಸ್ಟಿಮಾ ಕಂಪನಿಯು ಸ್ಥಾವರದೊಂದಿಗೆ ಕೊಟ್ಟ ಒಲೆ ಪರಮ ಡೆಲಿಕೇಟು ಆಗಿತ್ತು…!! ಒಂದೇ ವರ್ಷಕ್ಕೆ ಒಲೆಯನ್ನ ಬಿಸಾಡಿ ಬೇರೆ ಒಲೆಯನ್ನು ಕೊಂಡು ಬಳಸುತ್ತಿದ್ದೇವೆ.
ಬಂಧುಗಳೇ… ಈ ಬ್ಯಾಗ್ ಗ್ಯಾಸ್ ಸ್ಥಾವರ ಬಹಳ ಉಳಿತಾಯಕಾರಿ ಮತ್ತು ಕಡಿಮೆ ವೆಚ್ಚ. ಸರಿಯಾಗಿ ಅಧ್ಯಯನ ಮಾಡಿ . ಒಂದೆರಡು ಕಡೆ ಈ ಬ್ಯಾಗ್ ಗ್ಯಾಸ್ ನ್ನ ನೋಡಿ ಸ್ಥಾಪಿಸಿ….
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…