Advertisement
Opinion

“ಬ್ಯಾಗ್ ” ಗೋಬರ್ ಗ್ಯಾಸ್ | ಸಣ್ಣ ಗೋಪಾಲಕರಿಗೆ ಈ ಬ್ಯಾಗ್ ಮಾದರಿಯ ಗೋಬರ್ ಗ್ಯಾಸ್ ಅತ್ಯುತ್ತಮ

Share

ನಮ್ಮಲ್ಲೂ ಇನ್ಫೋಸಿಸ್(Infosys) ಪ್ರತಿಷ್ಠಾನದವರ ಪ್ರಾಯೋಜಕತ್ಚದ ಸಿಸ್ಟಿಮಾ ಕಂಪನಿಯ(Sistema Company) ಬ್ಯಾಗ್ ಬಯೋ ಗ್ಯಾಸ್(Bag Bio gas) ಸ್ಥಾವರವಿದೆ. ನಮ್ಮಲ್ಲಿ ಸಿಸ್ಟಿಮಾ ಕಂಪನಿಯು ಬಯೋ ಗ್ಯಾಸ್ ಸ್ಥಾವರ ಸ್ಥಾಪಿಸಿ ಹೋಗಿ ಒಂದು ವರ್ಷದ ತನಕ ಸಮಾಧಾನಕರವಾಗಿ ಗ್ಯಾಸ್ ಉತ್ಪತ್ತಿಯಾಗುತ್ತಿರಲಿಲ್ಲ. ಕೊನೆಗೆ ಸಿಸ್ಟಿಮಾದ ಅಧಿಕಾರಿಗಳು ಬಂದು ಬ್ಯಾಗ್ ನೊಳಗಿದ್ದ ಐದಾರು ಸಾವಿರ ಲೀಟರ್ ಅಮೂಲ್ಯ ಸ್ಲರಿಯನ್ನು(Slurry) ಗುಡ್ಡಕ್ಕೆ ಬಿಟ್ಟು ಹೋದರು. “ಗ್ಯಾಸ್(Gas) ಬರಲಿಲ್ಲ…!!!”… ಯಾಕೆ ಗ್ಯಾಸ್ ಉತ್ಪತ್ತಿ ಯಾಗುತ್ತಿಲ್ಲ ಎಂಬ ಪ್ರಶ್ನೆ ಗೆ ಯಾರಲ್ಲೂ ಉತ್ತರವಿರಲಿಲ್ಲ…!!!

ಮಲೆನಾಡು ಕರಾವಳಿಯ ಭಾಗದಲ್ಲಿ ” ಅರ್ಧ ನೆಲದೊಳಗಿನ ಅರ್ಧ ಹೊರಗಿರುವಂತೆ ಈ ಗ್ಯಾಸ್ ಬ್ಯಾಗ್ ಸ್ಥಾಪಿಸಿದರೆ ಮಳೆಗಾಲದಲ್ಲಿ ತೃಪ್ತಿಕರವಾಗಿ ಗ್ಯಾಸ್ ಉತ್ಪತ್ತಿಯಾಗೋಲ್ಲ…!! ಸಂಸ್ಥೆಯ ಮುಖ್ಯಾಧಿಕಾರಿಯೊಬ್ಬರ ಬಳಿ ಮಾತನಾಡಿದರೆ ಅವರು ಅಸಂಬದ್ಧವಾಗಿ ವಾದ ಮಾಡಿದರು. ಮಲೆನಾಡು ಕರಾವಳಿ ಪ್ರದೇಶದಲ್ಲಿ ಈ ಬ್ಯಾಗ್ ಸ್ಥಾವರವನ್ನು ನೆಲಮಟ್ಟದಿಂದ ಕನಿಷ್ಠ ಎರಡು ಅಡಿ ಎತ್ತರ ತಳಪಾಯ ಮಾಡಿ ಅದರ ಮೇಲೆ ಪ್ಲಾಂಟ್ ಸ್ಥಾಪಿಸಿ. ದಯವಿಟ್ಟು ಯಾರೂ ನೆಲದೊಳಗೆ ಈ ಪ್ಲಾಂಟ್ ಸ್ಥಾಪಿಸಬೇಡಿ. ಮತ್ತೆ ಮಳೆಗಾಲದಲ್ಲಿ ದಯವಿಟ್ಟು ಇಡೀ ಸ್ಥಾವರವನ್ನು ಮಳೆ ನೀರು ತಾಕದಂತೆ ಮುಚ್ಚಿ… ಮಲೆನಾಡು ಕರಾವಳಿಯಲ್ಲಿ ಈ ಪ್ಲಾಂಟ್ ಗೆ ಶಾಶ್ವತವಾಗಿ ಮಾಡನ್ನ ಮಾಡಿದರೂ ಉತ್ತಮ…

ದಿನಕ್ಕೆ ಎರಡು ಬುಟ್ಟಿ ಹಸಿ ಫ್ರೆಶ್ ಸಗಣಿಯನ್ನು ಸುಮಾರು ಅರವತ್ತು ಲೀಟರ್ ನೀರಿನೊಂದಿಗೆ ಚೆನ್ನಾಗಿ ಕರಡಿ ಸ್ಥಾವರದೊಳಕ್ಕೆ ಬಿಡಬೇಕು.‌ ಸ್ಲರಿ ಸಾಕಷ್ಟು ತೆಳ್ಳಗೇ ಇರಲಿ … ಸ್ಲರಿ ಹೊಂಡ ಇಳಿಜಾರಿನಲ್ಲಿರಲಿ.. ಮೂರು ನಾಲ್ಕು ದಿನಕ್ಕೊಮ್ಮೆ ನಮ್ಮಲ್ಲಿ ಸ್ಲರಿ ಹೊರಬರುತ್ತದೆ. ಈ ಕಾರಣಕ್ಕೆ ಗೋಏರ್ ಗ್ಯಾಸ್ ಸ್ಥಾವರಕ್ಕಿಂತ ತಗ್ಗಿನಲ್ಲಿ ಸ್ಲರಿ ಹೊಂಡ ಇರದಿದ್ದರೆ ಸ್ಲರಿ ಹೊರಕ್ಕೆ ಚೆಲ್ಲಿ ವ್ಯರ್ಥವಾಗುತ್ತದೆ. ಇದು ನಮ್ಮ ಸ್ವಂತ ಅನುಭವ…

ಸಿಸ್ಟಿಮಾ ಕಂಪನಿಯ ಒಲೆ ಖಂಡಿತವಾಗಿಯೂ ಗುಣಮಟ್ಟದ್ದಲ್ಲ. ನಮ್ಮ ಮನೆಯಲ್ಲಿ ಇಪ್ಪತ್ತೈದು ವರ್ಷಗಳ ಹಿಂದೆ ಹೆಚ್ ಪಿ‌ ಗ್ಯಾಸ್ ಸಂಪರ್ಕ ಪಡೆದಾಗ ಆ ಗ್ಯಾಸ್ ಸಂಪರ್ಕದೊಂದಿಗೆ ನಮ್ಮಲ್ಲಿ ಹೆಚ್ ಪಿ‌ ಸಂಸ್ಥೆ ನೀಡಿದ ಅಕೈ ಕಂಪನಿಯ ಒಲೆ ಇಂದಿಗೂ ಕೆಲವು ಚಿಕ್ಕ ಪುಟ್ಟ ರಿಪೇರಿಯೊಂದಿಗೆ ಕಾರ್ಯ ನಿರ್ವಹಣೆ ಮಾಡುತ್ತಿದೆ. ಆದರೆ ಸಿಸ್ಟಿಮಾ ಕಂಪನಿಯು ಸ್ಥಾವರದೊಂದಿಗೆ ಕೊಟ್ಟ ಒಲೆ ಪರಮ ಡೆಲಿಕೇಟು ಆಗಿತ್ತು…!! ಒಂದೇ ವರ್ಷಕ್ಕೆ ಒಲೆಯನ್ನ ಬಿಸಾಡಿ ಬೇರೆ ಒಲೆಯನ್ನು ಕೊಂಡು ಬಳಸುತ್ತಿದ್ದೇವೆ.
ಬಂಧುಗಳೇ… ಈ ಬ್ಯಾಗ್ ಗ್ಯಾಸ್ ಸ್ಥಾವರ ಬಹಳ ಉಳಿತಾಯಕಾರಿ ಮತ್ತು ಕಡಿಮೆ ವೆಚ್ಚ. ಸರಿಯಾಗಿ‌ ಅಧ್ಯಯನ ಮಾಡಿ . ಒಂದೆರಡು ಕಡೆ ಈ ಬ್ಯಾಗ್ ಗ್ಯಾಸ್ ನ್ನ ನೋಡಿ ಸ್ಥಾಪಿಸಿ….

ಬರಹ :
ಪ್ರಬಂಧ ಅಂಬುತೀರ್ಥ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

4 minutes ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

26 minutes ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

11 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

16 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

21 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago