ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಎಂ.ಟಿ. ಕೃಷ್ಣಪ್ಪ ಪ್ರಶ್ನೆಗೆ ಉತ್ತರಿಸಿದ ಸಚಿವರು, 7 ಸಾವಿರಕ್ಕೂ ಹೆಚ್ಚು ಅರ್ಜಿಗಳು 5 ಎಕರೆಗಿಂತ ಹೆಚ್ಚು ಜಮೀನು ಹೊಂದಿದವರಿಂದ ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಇತ್ಯರ್ಥ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಟಿ. ರಘುಮೂರ್ತಿ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ತಾಲೂಕುಗಳ ರಚನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿ ಎಂ.ಬಿ. ಪ್ರಕಾಶ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ವೈಜ್ಞಾನಿಕ ಅಧ್ಯಯನದ ಮೂಲಕ ನೀಡಿದ್ದ ವರದಿಯನ್ನು ಈ ಹಿಂದಿನ ಸರ್ಕಾರಗಳು ಪರಿಗಣಿಸಿಲ್ಲ. ಅದರ ಹೊರತಾಗಿಯೂ ಕಾಲ ಕಾಲಕ್ಕೆ ತಾಲೂಕುಗಳ ರಚನೆ ಮಾಡಲಾಗುತ್ತಿದೆ ಎಂದು ಹೇಳಿದರು. ಮಂತರ್ ಗೌಡ ಪ್ರಶ್ನೆಗೆ ಉತ್ತರಿಸಿದ ಕೃಷ್ಣ ಬೈರೇಗೌಡ, ಗುಡ್ಡಕುಸಿತದ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಡೆಗೋಡೆ ನಿರ್ಮಾಣ ಸೇರಿದಂತೆ ಇನ್ನಿತರೆ ದೂರಗಾಮಿ ಯೋಜನೆ ಕೈಗೊಳ್ಳಲು 500 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗುವುದು ಎಂದರು.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…