ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜನೆ ರೂಪಿಸಿದೆ.
ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಿದ್ದು, ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ. ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.
ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ.
1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈಗಾಗಲೇ ಇತರ 23 ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ತರಲಾಗಿದ್ದು, ಕರ್ನಾಟಕದಲ್ಲಿ ಕೂಡ ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…