ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ.ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಯೋಜನೆ ರೂಪಿಸಿದೆ.
ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಿದ್ದು, ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ. ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.
ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ.
1 ನೇ ತರಗತಿ ದಾಖಲಾತಿಗೆ 6 ವರ್ಷ ಪೂರ್ಣ ಕಡ್ಡಾಯ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈಗಾಗಲೇ ಇತರ 23 ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ತರಲಾಗಿದ್ದು, ಕರ್ನಾಟಕದಲ್ಲಿ ಕೂಡ ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…