Advertisement
Opinion

#DIET | ತೂಕ ಇಳಿಸಲು ಸಮತೋಲಿತ ಆಹಾರ | ಇದು ಸರಿಯಿದ್ದರೆ ಆರೋಗ್ಯ ನಮ್ಮ ಕೈಯಲ್ಲೆ ಇರುತ್ತೆ

Share

ಡಯಟ್ #DIET ಅಂದರೆ ಸಮತೋಲಿತ ಉತ್ತಮ ಆಹಾರವನ್ನು #Food ಸರಿಯಾದ ಸಮಯದಲ್ಲಿ ತಿನ್ನುವುದು. ನಮ್ಮ ದೇಹ#Bodyಕ್ಕೆ ಬೇಕಾಗಿರುವ ಪ್ರಮಾಣಕ್ಕಿಂತ ಯಥೇಚ್ಛವಾಗಿ ತಿನ್ನುವುದರಿಂದ ದೇಹದ ತೂಕ#Weight ಹೆಚ್ಚಾಗುತ್ತದೆ.

ಸಾಮಾನ್ಯವಾಗಿ ದೇಹದ ತೂಕದಲ್ಲಿ ಕೊಂಚ ಜಾಸ್ತಿ ಆದರೂ ಖಿನ್ನತೆಗೆ ಒಳಗಾಗುತ್ತೇವೆ.ಅಧಿಕ ಬೊಜ್ಜಿನ ಸಮಸ್ಯೆಯಿಂದ ಅದೆಷ್ಟೋ ಯುವ ಜನರು ತಮ್ಮ ಬಗ್ಗೆ ತಾವೇ ಕೇಳರಿಮೆ ಹುಟ್ಟಿಸಿಕೊಂಡು ಒತ್ತಡಕ್ಕೆ ಸಿಲುಕಿರುತ್ತಾರೆ. ಆರೋಗ್ಯಕರ ಆಹಾರ ಸೇವನೆಯಿಂದ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು ಹಾಗಾಗಿ ತಿನ್ನುವ ಆಹಾರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವುದು ಅಗತ್ಯ ಪ್ರತಿದಿನ 20 ನಿಮಿಷಗಳ ಕಾಲ ವ್ಯಾಯಾಮ ಮಾಡುವುದನ್ನು ಆರಂಭಿಸಿ, ನಂತರ ಜಾಗಿಂಗ್ ಮಾಡುವುದನ್ನು ಸೈಕ್ಲಿಂಗ್ ಮಾಡುವುದನ್ನು ಅಭ್ಯಾಸ ಮಾಡಿ ಇದರ ಜೊತೆಗೆ ಆಹಾರ ಕ್ರಮದಲ್ಲೂ ಬದಲಾವಣೆ ಮಾಡಿಕೊಳ್ಳಿ.

ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಸೇವಿಸಿ. ಮನಸ್ಸಿಗೆ ಬಂದ ಸಮಯದಲ್ಲಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗಲು ಕಾರಣವಾಗಬಹುದು ನಿಮ್ಮ ಊಟದೊಂದಿಗೆ ಪ್ರೋಟೀನ್ ಹಾಗೂ ನಾರಿನ ಅಂಶ ಅಧಿಕವಾಗಿರುವಂತೆ ನೋಡಿಕೊಳ್ಳಿ ಬೆಳಗ್ಗಿನ ಉಪಹಾರ ಬಹಳ ಮುಖ್ಯ ಇದು ದೇಹದಲ್ಲಿ ಚಯಾಪಚಯ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗಾಗಿ ಬೆಳಗಿನ ಉಪಹಾರ ಆರೋಗ್ಯಕರವಾಗಿರಬೇಕು ಹಣ್ಣುಗಳು ಹಾಗೂ ತರಕಾರಿಯಿಂದ ತಯಾರಿಸಿದ ಸಲಾಡನ್ನು ಬೆಳಿಗ್ಗೆ ಸೇವಿಸುವುದು ಉತ್ತಮ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿಂದರೆ ಅದರಿಂದ ತೂಕಇಳಿಸಲು ತುಂಬಾ ನೆರವಾಗಲಿದೆ. ಯಾಕೆಂದರೆ ಈ ಹಣ್ಣಿನಲ್ಲಿರುವ ಪಪೈನ್ ಎನ್ನುವ ಅಂಶ ದೇಹದ ಕೊಬ್ಬನ್ನು ಕರಗಿಸಿ ಫ್ರೀ ರಾಡಿಕಲ್ ಗಳನ್ನು ದೂರ ಮಾಡುವುದು.ಇದು ಕಡಿಮೆ ಕ್ಯಾಲರಿಯನ್ನು ಹೊಂದಿದೆ.

ಲಿಂಬೆ ಹಣ್ಣಿನ ರಸವನ್ನು ಒಂದು ಲೋಟ ಬಿಸಿ ನೀರಿಗೆ ಹಿಂಡಿಕೊಂಡು ಸಕ್ಕರೆ ಮತ್ತು ಉಪ್ಪು ಹಾಕದೆ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ದೇಹದ ತೂಕ ಇಳಿಯುವುದು. ಇದರಲ್ಲಿ ಹೇರಳವಾಗಿ ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚುವುದು. ಹಸಿವಿದ್ದಾಗ ಮಾತ್ರ ತಿನ್ನಿ ಪದೇಪದೇ ತಿನ್ನುವ ಅಭ್ಯಾಸವನ್ನು ಬಿಟ್ಟರೆ ತೂಕ ಇಳಿಸಬಹುದು. ಉತ್ತಮ ಸಮತೋಲಿತ ಆಹಾರ ಉತ್ತಮ ವ್ಯಾಯಾಮ ಹಾಗೂ ದಿನನಿತ್ಯ ಯೋಗಾಭ್ಯಾಸ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು. ಅಧಿಕ ತೂಕದಿಂದ ಅನೇಕ ಕಾಯಿಲೆಗಳು ಬರುವ ಸಾಧ್ಯತೆ ಇದೆ ಅವುಗಳಲ್ಲಿ ಪ್ರಮುಖವಾಗಿರುವುದು ಮಧುಮೇಹ PCOS ರಕ್ತದೊತ್ತಡ ಥೈರಾಯಿಡ್ ಸಮಸ್ಯೆ ಸಂಧಿವಾತ ಹೃದಯ ಸಂಬಂಧಿ ಕಾಯಿಲೆಗಳು ಇತ್ಯಾದಿ..

ಬರಹ :
Dr Jyothi k,  Laxmi Clinic Mangalore, 94481 68053
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

3 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

3 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

3 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

3 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

3 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

13 hours ago