Advertisement
Opinion

ತೂಕ ಇಳಿಸಲು ಸಮತೋಲಿತ ಆಹಾರ ಮುಖ್ಯ | ಅಧಿಕ ತೂಕ ಇತರ ಕಾಯಿಲೆಗಳಿಗೆ ಕಾರಣವಾಗಬಲ್ಲದು

Share

ಡಯಟ್ ಅಂದರೆ ಸಮತೋಲಿತ ಉತ್ತಮ ಆಹಾರವನ್ನು ಸರಿಯಾದ ಸಮಯದಲ್ಲಿ ತಿನ್ನುವುದು. ನಮ್ಮ ದೇಹಕ್ಕೆ ಬೇಕಾಗಿರುವ ಪ್ರಮಾಣಕ್ಕಿಂತ ಯಥೇಚ್ಛವಾಗಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ.

Advertisement
Advertisement

ಸಾಮಾನ್ಯವಾಗಿ ದೇಹದ ತೂಕದಲ್ಲಿ ಕೊಂಚ ಜಾಸ್ತಿ ಆದರೂ ಖಿನ್ನತೆಗೆ ಒಳಗಾಗುತ್ತೇವೆ.ಅಧಿಕ ಬೊಜ್ಜಿನ ಸಮಸ್ಯೆಯಿಂದ ಅದೆಷ್ಟೋ ಯುವ ಜನರು ತಮ್ಮ ಬಗ್ಗೆ ತಾವೇ ಕೇಳರಿಮೆ ಹುಟ್ಟಿಸಿಕೊಂಡು ಒತ್ತಡಕ್ಕೆ ಸಿಲುಕಿರುತ್ತಾರೆ. ಆರೋಗ್ಯಕರ ಆಹಾರ ಸೇವನೆಯಿಂದ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು ಹಾಗಾಗಿ ತಿನ್ನುವ ಆಹಾರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವುದು ಅಗತ್ಯ ಪ್ರತಿದಿನ 20 ನಿಮಿಷಗಳ ಕಾಲ ವ್ಯಾಯಾಮ ಮಾಡುವುದನ್ನು ಆರಂಭಿಸಿ, ನಂತರ ಜಾಗಿಂಗ್ ಮಾಡುವುದನ್ನು ಸೈಕ್ಲಿಂಗ್ ಮಾಡುವುದನ್ನು ಅಭ್ಯಾಸ ಮಾಡಿ ಇದರ ಜೊತೆಗೆ ಆಹಾರ ಕ್ರಮದಲ್ಲೂ ಬದಲಾವಣೆ ಮಾಡಿಕೊಳ್ಳಿ. ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಸೇವಿಸಿ.

Advertisement

ಮನಸ್ಸಿಗೆ ಬಂದ ಸಮಯದಲ್ಲಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗಲು ಕಾರಣವಾಗಬಹುದು ನಿಮ್ಮ ಊಟದೊಂದಿಗೆ ಪ್ರೋಟೀನ್ ಹಾಗೂ ನಾರಿನ ಅಂಶ ಅಧಿಕವಾಗಿರುವಂತೆ ನೋಡಿಕೊಳ್ಳಿ ಬೆಳಗ್ಗಿನ ಉಪಹಾರ ಬಹಳ ಮುಖ್ಯ ಇದು ದೇಹದಲ್ಲಿ ಚಯಾಪಚಯ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗಾಗಿ ಬೆಳಗಿನ ಉಪಹಾರ ಆರೋಗ್ಯಕರವಾಗಿರಬೇಕು ಹಣ್ಣುಗಳು ಹಾಗೂ ತರಕಾರಿಯಿಂದ ತಯಾರಿಸಿದ ಸಲಾಡನ್ನು ಬೆಳಿಗ್ಗೆ ಸೇವಿಸುವುದು ಉತ್ತಮ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿಂದರೆ ಅದರಿಂದ ತೂಕಇಳಿಸಲು ತುಂಬಾ ನೆರವಾಗಲಿದೆ. ಯಾಕೆಂದರೆ ಈ ಹಣ್ಣಿನಲ್ಲಿರುವ ಪಪೈನ್ ಎನ್ನುವ ಅಂಶ ದೇಹದ ಕೊಬ್ಬನ್ನು ಕರಗಿಸಿ ಫ್ರೀ ರಾಡಿಕಲ್ ಗಳನ್ನು ದೂರ ಮಾಡುವುದು.ಇದು ಕಡಿಮೆ ಕ್ಯಾಲರಿಯನ್ನು ಹೊಂದಿದೆ.

ಲಿಂಬೆ ಹಣ್ಣಿನ ರಸವನ್ನು ಒಂದು ಲೋಟ ಬಿಸಿ ನೀರಿಗೆ ಹಿಂಡಿಕೊಂಡು ಸಕ್ಕರೆ ಮತ್ತು ಉಪ್ಪು ಹಾಕದೆ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ದೇಹದ ತೂಕ ಇಳಿಯುವುದು ಇದರಲ್ಲಿ ಹೇರಳವಾಗಿ ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚುವುದು. ಹಸಿವಿದ್ದಾಗ ಮಾತ್ರ ತಿನ್ನಿ ಪದೇಪದೇ ತಿನ್ನುವ ಅಭ್ಯಾಸವನ್ನು ಬಿಟ್ಟರೆ ತೂಕ ಇಳಿಸಬಹುದು. ಉತ್ತಮ ಸಮತೋಲಿತ ಆಹಾರ ಉತ್ತಮ ವ್ಯಾಯಾಮ ಹಾಗೂ ದಿನನಿತ್ಯ ಯೋಗಾಭ್ಯಾಸ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು. ಅಧಿಕ ತೂಕದಿಂದ ಅನೇಕ ಕಾಯಿಲೆಗಳು ಬರುವ ಸಾಧ್ಯತೆ ಇದೆ ಅವುಗಳಲ್ಲಿ ಪ್ರಮುಖವಾಗಿರುವುದು ಮಧುಮೇಹ  ರಕ್ತದೊತ್ತಡ ಥೈರಾಯಿಡ್ ಸಮಸ್ಯೆ ಸಂಧಿವಾತ ಹೃದಯ ಸಂಬಂಧಿ ಕಾಯಿಲೆಗಳು ಇತ್ಯಾದಿ..

Advertisement

Dr.ಜ್ಯೋತಿ ಕೆ., BAMS.MD( Ayurveda)

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

3 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

3 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

4 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

4 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

4 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

4 hours ago