Advertisement
Opinion

ತೂಕ ಇಳಿಸಲು ಸಮತೋಲಿತ ಆಹಾರ ಮುಖ್ಯ | ಅಧಿಕ ತೂಕ ಇತರ ಕಾಯಿಲೆಗಳಿಗೆ ಕಾರಣವಾಗಬಲ್ಲದು

Share

ಡಯಟ್ ಅಂದರೆ ಸಮತೋಲಿತ ಉತ್ತಮ ಆಹಾರವನ್ನು ಸರಿಯಾದ ಸಮಯದಲ್ಲಿ ತಿನ್ನುವುದು. ನಮ್ಮ ದೇಹಕ್ಕೆ ಬೇಕಾಗಿರುವ ಪ್ರಮಾಣಕ್ಕಿಂತ ಯಥೇಚ್ಛವಾಗಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ.

ಸಾಮಾನ್ಯವಾಗಿ ದೇಹದ ತೂಕದಲ್ಲಿ ಕೊಂಚ ಜಾಸ್ತಿ ಆದರೂ ಖಿನ್ನತೆಗೆ ಒಳಗಾಗುತ್ತೇವೆ.ಅಧಿಕ ಬೊಜ್ಜಿನ ಸಮಸ್ಯೆಯಿಂದ ಅದೆಷ್ಟೋ ಯುವ ಜನರು ತಮ್ಮ ಬಗ್ಗೆ ತಾವೇ ಕೇಳರಿಮೆ ಹುಟ್ಟಿಸಿಕೊಂಡು ಒತ್ತಡಕ್ಕೆ ಸಿಲುಕಿರುತ್ತಾರೆ. ಆರೋಗ್ಯಕರ ಆಹಾರ ಸೇವನೆಯಿಂದ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು ಹಾಗಾಗಿ ತಿನ್ನುವ ಆಹಾರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವುದು ಅಗತ್ಯ ಪ್ರತಿದಿನ 20 ನಿಮಿಷಗಳ ಕಾಲ ವ್ಯಾಯಾಮ ಮಾಡುವುದನ್ನು ಆರಂಭಿಸಿ, ನಂತರ ಜಾಗಿಂಗ್ ಮಾಡುವುದನ್ನು ಸೈಕ್ಲಿಂಗ್ ಮಾಡುವುದನ್ನು ಅಭ್ಯಾಸ ಮಾಡಿ ಇದರ ಜೊತೆಗೆ ಆಹಾರ ಕ್ರಮದಲ್ಲೂ ಬದಲಾವಣೆ ಮಾಡಿಕೊಳ್ಳಿ. ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಸೇವಿಸಿ.

ಮನಸ್ಸಿಗೆ ಬಂದ ಸಮಯದಲ್ಲಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗಲು ಕಾರಣವಾಗಬಹುದು ನಿಮ್ಮ ಊಟದೊಂದಿಗೆ ಪ್ರೋಟೀನ್ ಹಾಗೂ ನಾರಿನ ಅಂಶ ಅಧಿಕವಾಗಿರುವಂತೆ ನೋಡಿಕೊಳ್ಳಿ ಬೆಳಗ್ಗಿನ ಉಪಹಾರ ಬಹಳ ಮುಖ್ಯ ಇದು ದೇಹದಲ್ಲಿ ಚಯಾಪಚಯ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗಾಗಿ ಬೆಳಗಿನ ಉಪಹಾರ ಆರೋಗ್ಯಕರವಾಗಿರಬೇಕು ಹಣ್ಣುಗಳು ಹಾಗೂ ತರಕಾರಿಯಿಂದ ತಯಾರಿಸಿದ ಸಲಾಡನ್ನು ಬೆಳಿಗ್ಗೆ ಸೇವಿಸುವುದು ಉತ್ತಮ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿಂದರೆ ಅದರಿಂದ ತೂಕಇಳಿಸಲು ತುಂಬಾ ನೆರವಾಗಲಿದೆ. ಯಾಕೆಂದರೆ ಈ ಹಣ್ಣಿನಲ್ಲಿರುವ ಪಪೈನ್ ಎನ್ನುವ ಅಂಶ ದೇಹದ ಕೊಬ್ಬನ್ನು ಕರಗಿಸಿ ಫ್ರೀ ರಾಡಿಕಲ್ ಗಳನ್ನು ದೂರ ಮಾಡುವುದು.ಇದು ಕಡಿಮೆ ಕ್ಯಾಲರಿಯನ್ನು ಹೊಂದಿದೆ.

ಲಿಂಬೆ ಹಣ್ಣಿನ ರಸವನ್ನು ಒಂದು ಲೋಟ ಬಿಸಿ ನೀರಿಗೆ ಹಿಂಡಿಕೊಂಡು ಸಕ್ಕರೆ ಮತ್ತು ಉಪ್ಪು ಹಾಕದೆ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ದೇಹದ ತೂಕ ಇಳಿಯುವುದು ಇದರಲ್ಲಿ ಹೇರಳವಾಗಿ ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚುವುದು. ಹಸಿವಿದ್ದಾಗ ಮಾತ್ರ ತಿನ್ನಿ ಪದೇಪದೇ ತಿನ್ನುವ ಅಭ್ಯಾಸವನ್ನು ಬಿಟ್ಟರೆ ತೂಕ ಇಳಿಸಬಹುದು. ಉತ್ತಮ ಸಮತೋಲಿತ ಆಹಾರ ಉತ್ತಮ ವ್ಯಾಯಾಮ ಹಾಗೂ ದಿನನಿತ್ಯ ಯೋಗಾಭ್ಯಾಸ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು. ಅಧಿಕ ತೂಕದಿಂದ ಅನೇಕ ಕಾಯಿಲೆಗಳು ಬರುವ ಸಾಧ್ಯತೆ ಇದೆ ಅವುಗಳಲ್ಲಿ ಪ್ರಮುಖವಾಗಿರುವುದು ಮಧುಮೇಹ  ರಕ್ತದೊತ್ತಡ ಥೈರಾಯಿಡ್ ಸಮಸ್ಯೆ ಸಂಧಿವಾತ ಹೃದಯ ಸಂಬಂಧಿ ಕಾಯಿಲೆಗಳು ಇತ್ಯಾದಿ..

Dr.ಜ್ಯೋತಿ ಕೆ., BAMS.MD( Ayurveda)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

12 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

13 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

13 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

14 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

14 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

14 hours ago