Advertisement
Opinion

ತೂಕ ಇಳಿಸಲು ಸಮತೋಲಿತ ಆಹಾರ ಮುಖ್ಯ | ಅಧಿಕ ತೂಕ ಇತರ ಕಾಯಿಲೆಗಳಿಗೆ ಕಾರಣವಾಗಬಲ್ಲದು

Share

ಡಯಟ್ ಅಂದರೆ ಸಮತೋಲಿತ ಉತ್ತಮ ಆಹಾರವನ್ನು ಸರಿಯಾದ ಸಮಯದಲ್ಲಿ ತಿನ್ನುವುದು. ನಮ್ಮ ದೇಹಕ್ಕೆ ಬೇಕಾಗಿರುವ ಪ್ರಮಾಣಕ್ಕಿಂತ ಯಥೇಚ್ಛವಾಗಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ.

ಸಾಮಾನ್ಯವಾಗಿ ದೇಹದ ತೂಕದಲ್ಲಿ ಕೊಂಚ ಜಾಸ್ತಿ ಆದರೂ ಖಿನ್ನತೆಗೆ ಒಳಗಾಗುತ್ತೇವೆ.ಅಧಿಕ ಬೊಜ್ಜಿನ ಸಮಸ್ಯೆಯಿಂದ ಅದೆಷ್ಟೋ ಯುವ ಜನರು ತಮ್ಮ ಬಗ್ಗೆ ತಾವೇ ಕೇಳರಿಮೆ ಹುಟ್ಟಿಸಿಕೊಂಡು ಒತ್ತಡಕ್ಕೆ ಸಿಲುಕಿರುತ್ತಾರೆ. ಆರೋಗ್ಯಕರ ಆಹಾರ ಸೇವನೆಯಿಂದ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು ಹಾಗಾಗಿ ತಿನ್ನುವ ಆಹಾರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವುದು ಅಗತ್ಯ ಪ್ರತಿದಿನ 20 ನಿಮಿಷಗಳ ಕಾಲ ವ್ಯಾಯಾಮ ಮಾಡುವುದನ್ನು ಆರಂಭಿಸಿ, ನಂತರ ಜಾಗಿಂಗ್ ಮಾಡುವುದನ್ನು ಸೈಕ್ಲಿಂಗ್ ಮಾಡುವುದನ್ನು ಅಭ್ಯಾಸ ಮಾಡಿ ಇದರ ಜೊತೆಗೆ ಆಹಾರ ಕ್ರಮದಲ್ಲೂ ಬದಲಾವಣೆ ಮಾಡಿಕೊಳ್ಳಿ. ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಸೇವಿಸಿ.

ಮನಸ್ಸಿಗೆ ಬಂದ ಸಮಯದಲ್ಲಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗಲು ಕಾರಣವಾಗಬಹುದು ನಿಮ್ಮ ಊಟದೊಂದಿಗೆ ಪ್ರೋಟೀನ್ ಹಾಗೂ ನಾರಿನ ಅಂಶ ಅಧಿಕವಾಗಿರುವಂತೆ ನೋಡಿಕೊಳ್ಳಿ ಬೆಳಗ್ಗಿನ ಉಪಹಾರ ಬಹಳ ಮುಖ್ಯ ಇದು ದೇಹದಲ್ಲಿ ಚಯಾಪಚಯ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗಾಗಿ ಬೆಳಗಿನ ಉಪಹಾರ ಆರೋಗ್ಯಕರವಾಗಿರಬೇಕು ಹಣ್ಣುಗಳು ಹಾಗೂ ತರಕಾರಿಯಿಂದ ತಯಾರಿಸಿದ ಸಲಾಡನ್ನು ಬೆಳಿಗ್ಗೆ ಸೇವಿಸುವುದು ಉತ್ತಮ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿಂದರೆ ಅದರಿಂದ ತೂಕಇಳಿಸಲು ತುಂಬಾ ನೆರವಾಗಲಿದೆ. ಯಾಕೆಂದರೆ ಈ ಹಣ್ಣಿನಲ್ಲಿರುವ ಪಪೈನ್ ಎನ್ನುವ ಅಂಶ ದೇಹದ ಕೊಬ್ಬನ್ನು ಕರಗಿಸಿ ಫ್ರೀ ರಾಡಿಕಲ್ ಗಳನ್ನು ದೂರ ಮಾಡುವುದು.ಇದು ಕಡಿಮೆ ಕ್ಯಾಲರಿಯನ್ನು ಹೊಂದಿದೆ.

ಲಿಂಬೆ ಹಣ್ಣಿನ ರಸವನ್ನು ಒಂದು ಲೋಟ ಬಿಸಿ ನೀರಿಗೆ ಹಿಂಡಿಕೊಂಡು ಸಕ್ಕರೆ ಮತ್ತು ಉಪ್ಪು ಹಾಕದೆ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ದೇಹದ ತೂಕ ಇಳಿಯುವುದು ಇದರಲ್ಲಿ ಹೇರಳವಾಗಿ ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚುವುದು. ಹಸಿವಿದ್ದಾಗ ಮಾತ್ರ ತಿನ್ನಿ ಪದೇಪದೇ ತಿನ್ನುವ ಅಭ್ಯಾಸವನ್ನು ಬಿಟ್ಟರೆ ತೂಕ ಇಳಿಸಬಹುದು. ಉತ್ತಮ ಸಮತೋಲಿತ ಆಹಾರ ಉತ್ತಮ ವ್ಯಾಯಾಮ ಹಾಗೂ ದಿನನಿತ್ಯ ಯೋಗಾಭ್ಯಾಸ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು. ಅಧಿಕ ತೂಕದಿಂದ ಅನೇಕ ಕಾಯಿಲೆಗಳು ಬರುವ ಸಾಧ್ಯತೆ ಇದೆ ಅವುಗಳಲ್ಲಿ ಪ್ರಮುಖವಾಗಿರುವುದು ಮಧುಮೇಹ  ರಕ್ತದೊತ್ತಡ ಥೈರಾಯಿಡ್ ಸಮಸ್ಯೆ ಸಂಧಿವಾತ ಹೃದಯ ಸಂಬಂಧಿ ಕಾಯಿಲೆಗಳು ಇತ್ಯಾದಿ..

Dr.ಜ್ಯೋತಿ ಕೆ., BAMS.MD( Ayurveda)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

57 minutes ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 hour ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

10 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago