Advertisement
Opinion

ತೂಕ ಇಳಿಸಲು ಸಮತೋಲಿತ ಆಹಾರ ಮುಖ್ಯ | ಅಧಿಕ ತೂಕ ಇತರ ಕಾಯಿಲೆಗಳಿಗೆ ಕಾರಣವಾಗಬಲ್ಲದು

Share

ಡಯಟ್ ಅಂದರೆ ಸಮತೋಲಿತ ಉತ್ತಮ ಆಹಾರವನ್ನು ಸರಿಯಾದ ಸಮಯದಲ್ಲಿ ತಿನ್ನುವುದು. ನಮ್ಮ ದೇಹಕ್ಕೆ ಬೇಕಾಗಿರುವ ಪ್ರಮಾಣಕ್ಕಿಂತ ಯಥೇಚ್ಛವಾಗಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ.

ಸಾಮಾನ್ಯವಾಗಿ ದೇಹದ ತೂಕದಲ್ಲಿ ಕೊಂಚ ಜಾಸ್ತಿ ಆದರೂ ಖಿನ್ನತೆಗೆ ಒಳಗಾಗುತ್ತೇವೆ.ಅಧಿಕ ಬೊಜ್ಜಿನ ಸಮಸ್ಯೆಯಿಂದ ಅದೆಷ್ಟೋ ಯುವ ಜನರು ತಮ್ಮ ಬಗ್ಗೆ ತಾವೇ ಕೇಳರಿಮೆ ಹುಟ್ಟಿಸಿಕೊಂಡು ಒತ್ತಡಕ್ಕೆ ಸಿಲುಕಿರುತ್ತಾರೆ. ಆರೋಗ್ಯಕರ ಆಹಾರ ಸೇವನೆಯಿಂದ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು ಹಾಗಾಗಿ ತಿನ್ನುವ ಆಹಾರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವುದು ಅಗತ್ಯ ಪ್ರತಿದಿನ 20 ನಿಮಿಷಗಳ ಕಾಲ ವ್ಯಾಯಾಮ ಮಾಡುವುದನ್ನು ಆರಂಭಿಸಿ, ನಂತರ ಜಾಗಿಂಗ್ ಮಾಡುವುದನ್ನು ಸೈಕ್ಲಿಂಗ್ ಮಾಡುವುದನ್ನು ಅಭ್ಯಾಸ ಮಾಡಿ ಇದರ ಜೊತೆಗೆ ಆಹಾರ ಕ್ರಮದಲ್ಲೂ ಬದಲಾವಣೆ ಮಾಡಿಕೊಳ್ಳಿ. ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಸೇವಿಸಿ.

ಮನಸ್ಸಿಗೆ ಬಂದ ಸಮಯದಲ್ಲಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗಲು ಕಾರಣವಾಗಬಹುದು ನಿಮ್ಮ ಊಟದೊಂದಿಗೆ ಪ್ರೋಟೀನ್ ಹಾಗೂ ನಾರಿನ ಅಂಶ ಅಧಿಕವಾಗಿರುವಂತೆ ನೋಡಿಕೊಳ್ಳಿ ಬೆಳಗ್ಗಿನ ಉಪಹಾರ ಬಹಳ ಮುಖ್ಯ ಇದು ದೇಹದಲ್ಲಿ ಚಯಾಪಚಯ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗಾಗಿ ಬೆಳಗಿನ ಉಪಹಾರ ಆರೋಗ್ಯಕರವಾಗಿರಬೇಕು ಹಣ್ಣುಗಳು ಹಾಗೂ ತರಕಾರಿಯಿಂದ ತಯಾರಿಸಿದ ಸಲಾಡನ್ನು ಬೆಳಿಗ್ಗೆ ಸೇವಿಸುವುದು ಉತ್ತಮ ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ತಿಂದರೆ ಅದರಿಂದ ತೂಕಇಳಿಸಲು ತುಂಬಾ ನೆರವಾಗಲಿದೆ. ಯಾಕೆಂದರೆ ಈ ಹಣ್ಣಿನಲ್ಲಿರುವ ಪಪೈನ್ ಎನ್ನುವ ಅಂಶ ದೇಹದ ಕೊಬ್ಬನ್ನು ಕರಗಿಸಿ ಫ್ರೀ ರಾಡಿಕಲ್ ಗಳನ್ನು ದೂರ ಮಾಡುವುದು.ಇದು ಕಡಿಮೆ ಕ್ಯಾಲರಿಯನ್ನು ಹೊಂದಿದೆ.

ಲಿಂಬೆ ಹಣ್ಣಿನ ರಸವನ್ನು ಒಂದು ಲೋಟ ಬಿಸಿ ನೀರಿಗೆ ಹಿಂಡಿಕೊಂಡು ಸಕ್ಕರೆ ಮತ್ತು ಉಪ್ಪು ಹಾಕದೆ ಖಾಲಿ ಹೊಟ್ಟೆಗೆ ಕುಡಿಯುವುದರಿಂದ ದೇಹದ ತೂಕ ಇಳಿಯುವುದು ಇದರಲ್ಲಿ ಹೇರಳವಾಗಿ ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚುವುದು. ಹಸಿವಿದ್ದಾಗ ಮಾತ್ರ ತಿನ್ನಿ ಪದೇಪದೇ ತಿನ್ನುವ ಅಭ್ಯಾಸವನ್ನು ಬಿಟ್ಟರೆ ತೂಕ ಇಳಿಸಬಹುದು. ಉತ್ತಮ ಸಮತೋಲಿತ ಆಹಾರ ಉತ್ತಮ ವ್ಯಾಯಾಮ ಹಾಗೂ ದಿನನಿತ್ಯ ಯೋಗಾಭ್ಯಾಸ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು. ಅಧಿಕ ತೂಕದಿಂದ ಅನೇಕ ಕಾಯಿಲೆಗಳು ಬರುವ ಸಾಧ್ಯತೆ ಇದೆ ಅವುಗಳಲ್ಲಿ ಪ್ರಮುಖವಾಗಿರುವುದು ಮಧುಮೇಹ  ರಕ್ತದೊತ್ತಡ ಥೈರಾಯಿಡ್ ಸಮಸ್ಯೆ ಸಂಧಿವಾತ ಹೃದಯ ಸಂಬಂಧಿ ಕಾಯಿಲೆಗಳು ಇತ್ಯಾದಿ..

Dr.ಜ್ಯೋತಿ ಕೆ., BAMS.MD( Ayurveda)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

7 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

10 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

11 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

12 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago