ಕಿಸಾನ್‌ ಸಂಘದಿಂದ ಬಲರಾಮ ಜಯಂತಿ | ಕೃಷಿಯಲ್ಲಿ ಆದಾಯ ಹೆಚ್ಚಿಸುವತ್ತ ಚಿಂತನೆ ಅಗತ್ಯ |

September 15, 2024
4:11 PM

ಭಾರತೀಯ ಕಿಸಾನ್‌ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ ಸಭಾಭವನದಲ್ಲಿ ಬಲರಾಮ ಜಯಂತಿ ಆಚರಣೆ ನಡೆಯಿತು.

Advertisement
Advertisement
Advertisement
Advertisement
Advertisement

ಕಾರ್ಯಕ್ರಮದ ಅತಿಥಿಯಾಗಿದ್ದ ಯುವ ಕೃಷಿಕ ಪ್ರಮೋದ್‌ ಡ್ರಾಗನ್‌ ಫ್ರುಟ್‌ ಕೃಷಿಯ ಬಗ್ಗೆ ಮಾತನಾಡಿ, ಕೃಷಿಕರು ಅಡಿಕೆ ಮಾತ್ರವಲ್ಲ ಪರ್ಯಾಯ ಕೃಷಿಯಿಂದಲೂ ಆದಾಯ ಗಳಿಸುವ ಕಡೆಗೆ ಗಮನಹರಿಸಬೇಕಿದೆ. ನಗರದ ಉದ್ಯೋಗ ಬಿಟ್ಟು ಕೃಷಿಯನ್ನೇ ಉದ್ಯೋಗ ಮಾಡುವ ವೇಳೆ ಆರ್ಥಿಕವಾಗಿಯೂ ಯಾವುದು ಹೆಚ್ಚು ಅನುಕೂಲ ಎಂದು ಅಧ್ಯಯನ ನಡೆಸಿದ  ಬಳಿಕ ಡ್ರಾಗನ್‌ ಫ್ರುಟ್‌ ಮಾಡಿದ್ದೇನೆ. ಭವಿಷ್ಯದಲ್ಲಿ ಅಡಿಕೆಯ ಜೊತೆಗೆ ಪರ್ಯಾಯವಾಗಿ ಇನ್ನೊಂದು ಕೃಷಿಯೂ ಅಗತ್ಯ ಇದೆ ಎಂದು ಯುಗ ಕೃಷಿಕ ಪ್ರಮೋದ್‌ ಹೇಳಿದರು.

Advertisement

ಸಭಾಧ್ಯಕ್ಷತೆ ವಹಿಸಿದ್ದ ಭಾರತೀಯ ಕಿಸಾನ್‌ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್‌ ಜಿ ಪ್ರಭಾಕರ ರೈ ಮಾತನಾಡಿ, ಕೃಷಿಕರು ತಮ್ಮ ಸಮಸ್ಯೆಗಳಿಗೆ ಒಂದಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಹಲವಾರು ರೈತಪರವಾದ ಕೆಲಸವನ್ನು ಭಾಕಿಸಂ ಮಾಡಿದೆ ಎಂದು ಹೇಳಿದರು.

ಈ ಸಂದರ್ಭ ದೇಶೀ ಗೋತಳಿ ಸಾಕಾಣೆ ಹಾಗೂ ಗವ್ಯ ಉತ್ಪನ್ನ ತಯಾರಕರಾದ ಮಹಾಲಿಂಗೇಶ್ವರ ಭಟ್‌ ಜೋಗಿಯಡ್ಕ ಹಾಗೂ ಕೃಷಿಕರಾದ ನಾಗವೇಣಿ ರೈ ಎಣ್ಮೂರುಗುತ್ತು ಇವರನ್ನು ಸನ್ಮಾನಿಸಲಾಯಿತು.

Advertisement

ಗೋಪಾಲಕೃಷ್ಣ ಭಟ್‌ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ಕಾರ್ಯದರ್ಶಿ ಸಾಯಿಶೇಖರ ಕರಿಕಳ ಕಾರ್ಯಕ್ರಮ ನಿರೂಪಿಸಿದರು. ರಮೇಶ್‌ ಕೋಟೆ ವಂದಿಸಿದರು.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror