ಭಾರತೀಯ ಕಿಸಾನ್ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ ಸಭಾಭವನದಲ್ಲಿ ಬಲರಾಮ ಜಯಂತಿ ಆಚರಣೆ ನಡೆಯಿತು.
ಕಾರ್ಯಕ್ರಮದ ಅತಿಥಿಯಾಗಿದ್ದ ಯುವ ಕೃಷಿಕ ಪ್ರಮೋದ್ ಡ್ರಾಗನ್ ಫ್ರುಟ್ ಕೃಷಿಯ ಬಗ್ಗೆ ಮಾತನಾಡಿ, ಕೃಷಿಕರು ಅಡಿಕೆ ಮಾತ್ರವಲ್ಲ ಪರ್ಯಾಯ ಕೃಷಿಯಿಂದಲೂ ಆದಾಯ ಗಳಿಸುವ ಕಡೆಗೆ ಗಮನಹರಿಸಬೇಕಿದೆ. ನಗರದ ಉದ್ಯೋಗ ಬಿಟ್ಟು ಕೃಷಿಯನ್ನೇ ಉದ್ಯೋಗ ಮಾಡುವ ವೇಳೆ ಆರ್ಥಿಕವಾಗಿಯೂ ಯಾವುದು ಹೆಚ್ಚು ಅನುಕೂಲ ಎಂದು ಅಧ್ಯಯನ ನಡೆಸಿದ ಬಳಿಕ ಡ್ರಾಗನ್ ಫ್ರುಟ್ ಮಾಡಿದ್ದೇನೆ. ಭವಿಷ್ಯದಲ್ಲಿ ಅಡಿಕೆಯ ಜೊತೆಗೆ ಪರ್ಯಾಯವಾಗಿ ಇನ್ನೊಂದು ಕೃಷಿಯೂ ಅಗತ್ಯ ಇದೆ ಎಂದು ಯುಗ ಕೃಷಿಕ ಪ್ರಮೋದ್ ಹೇಳಿದರು.
ಸಭಾಧ್ಯಕ್ಷತೆ ವಹಿಸಿದ್ದ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಮಾತನಾಡಿ, ಕೃಷಿಕರು ತಮ್ಮ ಸಮಸ್ಯೆಗಳಿಗೆ ಒಂದಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಹಲವಾರು ರೈತಪರವಾದ ಕೆಲಸವನ್ನು ಭಾಕಿಸಂ ಮಾಡಿದೆ ಎಂದು ಹೇಳಿದರು.
ಈ ಸಂದರ್ಭ ದೇಶೀ ಗೋತಳಿ ಸಾಕಾಣೆ ಹಾಗೂ ಗವ್ಯ ಉತ್ಪನ್ನ ತಯಾರಕರಾದ ಮಹಾಲಿಂಗೇಶ್ವರ ಭಟ್ ಜೋಗಿಯಡ್ಕ ಹಾಗೂ ಕೃಷಿಕರಾದ ನಾಗವೇಣಿ ರೈ ಎಣ್ಮೂರುಗುತ್ತು ಇವರನ್ನು ಸನ್ಮಾನಿಸಲಾಯಿತು.
ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ಕಾರ್ಯದರ್ಶಿ ಸಾಯಿಶೇಖರ ಕರಿಕಳ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಕೋಟೆ ವಂದಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…