ಭಾರತೀಯ ಕಿಸಾನ್ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ ಸಭಾಭವನದಲ್ಲಿ ಬಲರಾಮ ಜಯಂತಿ ಆಚರಣೆ ನಡೆಯಿತು.
ಕಾರ್ಯಕ್ರಮದ ಅತಿಥಿಯಾಗಿದ್ದ ಯುವ ಕೃಷಿಕ ಪ್ರಮೋದ್ ಡ್ರಾಗನ್ ಫ್ರುಟ್ ಕೃಷಿಯ ಬಗ್ಗೆ ಮಾತನಾಡಿ, ಕೃಷಿಕರು ಅಡಿಕೆ ಮಾತ್ರವಲ್ಲ ಪರ್ಯಾಯ ಕೃಷಿಯಿಂದಲೂ ಆದಾಯ ಗಳಿಸುವ ಕಡೆಗೆ ಗಮನಹರಿಸಬೇಕಿದೆ. ನಗರದ ಉದ್ಯೋಗ ಬಿಟ್ಟು ಕೃಷಿಯನ್ನೇ ಉದ್ಯೋಗ ಮಾಡುವ ವೇಳೆ ಆರ್ಥಿಕವಾಗಿಯೂ ಯಾವುದು ಹೆಚ್ಚು ಅನುಕೂಲ ಎಂದು ಅಧ್ಯಯನ ನಡೆಸಿದ ಬಳಿಕ ಡ್ರಾಗನ್ ಫ್ರುಟ್ ಮಾಡಿದ್ದೇನೆ. ಭವಿಷ್ಯದಲ್ಲಿ ಅಡಿಕೆಯ ಜೊತೆಗೆ ಪರ್ಯಾಯವಾಗಿ ಇನ್ನೊಂದು ಕೃಷಿಯೂ ಅಗತ್ಯ ಇದೆ ಎಂದು ಯುಗ ಕೃಷಿಕ ಪ್ರಮೋದ್ ಹೇಳಿದರು.
ಸಭಾಧ್ಯಕ್ಷತೆ ವಹಿಸಿದ್ದ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಮಾತನಾಡಿ, ಕೃಷಿಕರು ತಮ್ಮ ಸಮಸ್ಯೆಗಳಿಗೆ ಒಂದಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಹಲವಾರು ರೈತಪರವಾದ ಕೆಲಸವನ್ನು ಭಾಕಿಸಂ ಮಾಡಿದೆ ಎಂದು ಹೇಳಿದರು.
ಈ ಸಂದರ್ಭ ದೇಶೀ ಗೋತಳಿ ಸಾಕಾಣೆ ಹಾಗೂ ಗವ್ಯ ಉತ್ಪನ್ನ ತಯಾರಕರಾದ ಮಹಾಲಿಂಗೇಶ್ವರ ಭಟ್ ಜೋಗಿಯಡ್ಕ ಹಾಗೂ ಕೃಷಿಕರಾದ ನಾಗವೇಣಿ ರೈ ಎಣ್ಮೂರುಗುತ್ತು ಇವರನ್ನು ಸನ್ಮಾನಿಸಲಾಯಿತು.
ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ಕಾರ್ಯದರ್ಶಿ ಸಾಯಿಶೇಖರ ಕರಿಕಳ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಕೋಟೆ ವಂದಿಸಿದರು.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…
ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.