ಭಾರತೀಯ ಕಿಸಾನ್ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ ಸಭಾಭವನದಲ್ಲಿ ಬಲರಾಮ ಜಯಂತಿ ಆಚರಣೆ ನಡೆಯಿತು.
ಕಾರ್ಯಕ್ರಮದ ಅತಿಥಿಯಾಗಿದ್ದ ಯುವ ಕೃಷಿಕ ಪ್ರಮೋದ್ ಡ್ರಾಗನ್ ಫ್ರುಟ್ ಕೃಷಿಯ ಬಗ್ಗೆ ಮಾತನಾಡಿ, ಕೃಷಿಕರು ಅಡಿಕೆ ಮಾತ್ರವಲ್ಲ ಪರ್ಯಾಯ ಕೃಷಿಯಿಂದಲೂ ಆದಾಯ ಗಳಿಸುವ ಕಡೆಗೆ ಗಮನಹರಿಸಬೇಕಿದೆ. ನಗರದ ಉದ್ಯೋಗ ಬಿಟ್ಟು ಕೃಷಿಯನ್ನೇ ಉದ್ಯೋಗ ಮಾಡುವ ವೇಳೆ ಆರ್ಥಿಕವಾಗಿಯೂ ಯಾವುದು ಹೆಚ್ಚು ಅನುಕೂಲ ಎಂದು ಅಧ್ಯಯನ ನಡೆಸಿದ ಬಳಿಕ ಡ್ರಾಗನ್ ಫ್ರುಟ್ ಮಾಡಿದ್ದೇನೆ. ಭವಿಷ್ಯದಲ್ಲಿ ಅಡಿಕೆಯ ಜೊತೆಗೆ ಪರ್ಯಾಯವಾಗಿ ಇನ್ನೊಂದು ಕೃಷಿಯೂ ಅಗತ್ಯ ಇದೆ ಎಂದು ಯುಗ ಕೃಷಿಕ ಪ್ರಮೋದ್ ಹೇಳಿದರು.
ಸಭಾಧ್ಯಕ್ಷತೆ ವಹಿಸಿದ್ದ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಮಾತನಾಡಿ, ಕೃಷಿಕರು ತಮ್ಮ ಸಮಸ್ಯೆಗಳಿಗೆ ಒಂದಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಹಲವಾರು ರೈತಪರವಾದ ಕೆಲಸವನ್ನು ಭಾಕಿಸಂ ಮಾಡಿದೆ ಎಂದು ಹೇಳಿದರು.
ಈ ಸಂದರ್ಭ ದೇಶೀ ಗೋತಳಿ ಸಾಕಾಣೆ ಹಾಗೂ ಗವ್ಯ ಉತ್ಪನ್ನ ತಯಾರಕರಾದ ಮಹಾಲಿಂಗೇಶ್ವರ ಭಟ್ ಜೋಗಿಯಡ್ಕ ಹಾಗೂ ಕೃಷಿಕರಾದ ನಾಗವೇಣಿ ರೈ ಎಣ್ಮೂರುಗುತ್ತು ಇವರನ್ನು ಸನ್ಮಾನಿಸಲಾಯಿತು.
ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ಕಾರ್ಯದರ್ಶಿ ಸಾಯಿಶೇಖರ ಕರಿಕಳ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಕೋಟೆ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…