ಭಾರತೀಯ ಕಿಸಾನ್ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ ಸಭಾಭವನದಲ್ಲಿ ಬಲರಾಮ ಜಯಂತಿ ಆಚರಣೆ ನಡೆಯಿತು.
ಕಾರ್ಯಕ್ರಮದ ಅತಿಥಿಯಾಗಿದ್ದ ಯುವ ಕೃಷಿಕ ಪ್ರಮೋದ್ ಡ್ರಾಗನ್ ಫ್ರುಟ್ ಕೃಷಿಯ ಬಗ್ಗೆ ಮಾತನಾಡಿ, ಕೃಷಿಕರು ಅಡಿಕೆ ಮಾತ್ರವಲ್ಲ ಪರ್ಯಾಯ ಕೃಷಿಯಿಂದಲೂ ಆದಾಯ ಗಳಿಸುವ ಕಡೆಗೆ ಗಮನಹರಿಸಬೇಕಿದೆ. ನಗರದ ಉದ್ಯೋಗ ಬಿಟ್ಟು ಕೃಷಿಯನ್ನೇ ಉದ್ಯೋಗ ಮಾಡುವ ವೇಳೆ ಆರ್ಥಿಕವಾಗಿಯೂ ಯಾವುದು ಹೆಚ್ಚು ಅನುಕೂಲ ಎಂದು ಅಧ್ಯಯನ ನಡೆಸಿದ ಬಳಿಕ ಡ್ರಾಗನ್ ಫ್ರುಟ್ ಮಾಡಿದ್ದೇನೆ. ಭವಿಷ್ಯದಲ್ಲಿ ಅಡಿಕೆಯ ಜೊತೆಗೆ ಪರ್ಯಾಯವಾಗಿ ಇನ್ನೊಂದು ಕೃಷಿಯೂ ಅಗತ್ಯ ಇದೆ ಎಂದು ಯುಗ ಕೃಷಿಕ ಪ್ರಮೋದ್ ಹೇಳಿದರು.
ಸಭಾಧ್ಯಕ್ಷತೆ ವಹಿಸಿದ್ದ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಮಾತನಾಡಿ, ಕೃಷಿಕರು ತಮ್ಮ ಸಮಸ್ಯೆಗಳಿಗೆ ಒಂದಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಹಲವಾರು ರೈತಪರವಾದ ಕೆಲಸವನ್ನು ಭಾಕಿಸಂ ಮಾಡಿದೆ ಎಂದು ಹೇಳಿದರು.
ಈ ಸಂದರ್ಭ ದೇಶೀ ಗೋತಳಿ ಸಾಕಾಣೆ ಹಾಗೂ ಗವ್ಯ ಉತ್ಪನ್ನ ತಯಾರಕರಾದ ಮಹಾಲಿಂಗೇಶ್ವರ ಭಟ್ ಜೋಗಿಯಡ್ಕ ಹಾಗೂ ಕೃಷಿಕರಾದ ನಾಗವೇಣಿ ರೈ ಎಣ್ಮೂರುಗುತ್ತು ಇವರನ್ನು ಸನ್ಮಾನಿಸಲಾಯಿತು.
ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ಕಾರ್ಯದರ್ಶಿ ಸಾಯಿಶೇಖರ ಕರಿಕಳ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಕೋಟೆ ವಂದಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…