ಭಾರತೀಯ ಕಿಸಾನ್ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ ಸಭಾಭವನದಲ್ಲಿ ಬಲರಾಮ ಜಯಂತಿ ಆಚರಣೆ ನಡೆಯಿತು.
ಕಾರ್ಯಕ್ರಮದ ಅತಿಥಿಯಾಗಿದ್ದ ಯುವ ಕೃಷಿಕ ಪ್ರಮೋದ್ ಡ್ರಾಗನ್ ಫ್ರುಟ್ ಕೃಷಿಯ ಬಗ್ಗೆ ಮಾತನಾಡಿ, ಕೃಷಿಕರು ಅಡಿಕೆ ಮಾತ್ರವಲ್ಲ ಪರ್ಯಾಯ ಕೃಷಿಯಿಂದಲೂ ಆದಾಯ ಗಳಿಸುವ ಕಡೆಗೆ ಗಮನಹರಿಸಬೇಕಿದೆ. ನಗರದ ಉದ್ಯೋಗ ಬಿಟ್ಟು ಕೃಷಿಯನ್ನೇ ಉದ್ಯೋಗ ಮಾಡುವ ವೇಳೆ ಆರ್ಥಿಕವಾಗಿಯೂ ಯಾವುದು ಹೆಚ್ಚು ಅನುಕೂಲ ಎಂದು ಅಧ್ಯಯನ ನಡೆಸಿದ ಬಳಿಕ ಡ್ರಾಗನ್ ಫ್ರುಟ್ ಮಾಡಿದ್ದೇನೆ. ಭವಿಷ್ಯದಲ್ಲಿ ಅಡಿಕೆಯ ಜೊತೆಗೆ ಪರ್ಯಾಯವಾಗಿ ಇನ್ನೊಂದು ಕೃಷಿಯೂ ಅಗತ್ಯ ಇದೆ ಎಂದು ಯುಗ ಕೃಷಿಕ ಪ್ರಮೋದ್ ಹೇಳಿದರು.
ಸಭಾಧ್ಯಕ್ಷತೆ ವಹಿಸಿದ್ದ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಮಾತನಾಡಿ, ಕೃಷಿಕರು ತಮ್ಮ ಸಮಸ್ಯೆಗಳಿಗೆ ಒಂದಾಗಿ ಕೆಲಸ ಮಾಡಬೇಕಿದೆ. ಈಗಾಗಲೇ ಹಲವಾರು ರೈತಪರವಾದ ಕೆಲಸವನ್ನು ಭಾಕಿಸಂ ಮಾಡಿದೆ ಎಂದು ಹೇಳಿದರು.
ಈ ಸಂದರ್ಭ ದೇಶೀ ಗೋತಳಿ ಸಾಕಾಣೆ ಹಾಗೂ ಗವ್ಯ ಉತ್ಪನ್ನ ತಯಾರಕರಾದ ಮಹಾಲಿಂಗೇಶ್ವರ ಭಟ್ ಜೋಗಿಯಡ್ಕ ಹಾಗೂ ಕೃಷಿಕರಾದ ನಾಗವೇಣಿ ರೈ ಎಣ್ಮೂರುಗುತ್ತು ಇವರನ್ನು ಸನ್ಮಾನಿಸಲಾಯಿತು.
ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ಕಾರ್ಯದರ್ಶಿ ಸಾಯಿಶೇಖರ ಕರಿಕಳ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಕೋಟೆ ವಂದಿಸಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…