ಬಲಿಪ ನಾರಾಯಣ ಭಾಗವತ ಇನ್ನಿಲ್ಲ |

February 16, 2023
9:07 PM

ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದ ಬಲಿಪ ನಾರಾಯಣ ಭಾಗವತರು  (84 ) ಗುರುವಾರ ಸಂಜೆ ನಿಧನರಾಗಿದ್ದಾರೆ.

ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಯಕ್ಷಗಾನದಲ್ಲಿ ಕಲಾಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ , ಸಾಮಗ ಪ್ರಶಸ್ತಿ ,  ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’, ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ ,  71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ
ಬಲಿಪ ನಾರಾಯಣ ಭಾಗವತರ ನಿಧನದಿಂದ ಯಕ್ಷ ರಂಗದ ಹಿರಿಯ ಚೇತನವೊಂದು ಅಗಲಿದಂತಾಗಿದೆ. ಬಲಿಪ ಪರಂಪರೆಯ ಕಂಚಿನ ಕಂಠ ಹಾಗೂ ಅಪಾರ ವಿದ್ವತ್ ನ ಜತೆ ಅವರು ಮೇರು ಸದೃಶ ವ್ಯಕ್ತಿತ್ವ ಹೊಂದಿದ್ದರು. ಯಕ್ಷರಂಗಕ್ಕೆ ಅವರು ನೀಡಿದ ಕೊಡುಗೆ ಶಾಶ್ವತವಾಗಿ ಅಭಿಮಾನಗಳ ಮನಸ್ಸಿನಲ್ಲಿ ಉಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪದಲ್ಲಿ‌ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror