Advertisement
ನಿಧನ‌ ಸುದ್ದಿಗಳು

ಬಲಿಪ ನಾರಾಯಣ ಭಾಗವತ ಇನ್ನಿಲ್ಲ |

Share

ಯಕ್ಷ ರಂಗದ ಭೀಷ್ಮ, ಭಾಗವತಿಕೆಯಲ್ಲಿ ತನ್ನದೇ ಮೇರು ಶೈಲಿಯ ಮೂಲಕ ಜನಮಾನಸಕ್ಕೆ ಹತ್ತಿರವಾಗಿದ್ದ ಬಲಿಪ ನಾರಾಯಣ ಭಾಗವತರು  (84 ) ಗುರುವಾರ ಸಂಜೆ ನಿಧನರಾಗಿದ್ದಾರೆ.

ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಯಕ್ಷಗಾನದಲ್ಲಿ ಕಲಾಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ , ಸಾಮಗ ಪ್ರಶಸ್ತಿ ,  ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ `ಜ್ಞಾನ ಪ್ರಶಸ್ತಿ’, ಕರ್ನಾಟಕ ಜಾನಪದ ಪರಿಷತ್ತು ದೊಡ್ಡಮನೆ ಲಿಂಗೇಗೌಡ ಪ್ರಶಸ್ತಿ ,  71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ `ಕರ್ನಾಟಕ ಶ್ರೀ ‘ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ
ಬಲಿಪ ನಾರಾಯಣ ಭಾಗವತರ ನಿಧನದಿಂದ ಯಕ್ಷ ರಂಗದ ಹಿರಿಯ ಚೇತನವೊಂದು ಅಗಲಿದಂತಾಗಿದೆ. ಬಲಿಪ ಪರಂಪರೆಯ ಕಂಚಿನ ಕಂಠ ಹಾಗೂ ಅಪಾರ ವಿದ್ವತ್ ನ ಜತೆ ಅವರು ಮೇರು ಸದೃಶ ವ್ಯಕ್ತಿತ್ವ ಹೊಂದಿದ್ದರು. ಯಕ್ಷರಂಗಕ್ಕೆ ಅವರು ನೀಡಿದ ಕೊಡುಗೆ ಶಾಶ್ವತವಾಗಿ ಅಭಿಮಾನಗಳ ಮನಸ್ಸಿನಲ್ಲಿ ಉಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪದಲ್ಲಿ‌ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

18 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

19 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

20 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

22 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago