ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪ್ರಸಾದ್ ಭಾಗವತರು ಯಕ್ಷಕಲಾಭಿಮಾನಿಗಳ ನೆಚ್ಚಿನ ಭಾಗವತರಾಗಿದ್ದರು. ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರರಾದ ಬಲಿಪ ಪ್ರಸಾದ್ ಅವರು, ರಕ್ತಗತವಾಗಿ ಬಂದಿದ್ದ ಯಕ್ಷಗಾನ ಭಾಗವತಿಕೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಮಿಂಚಿದ್ದರು. ತಂದೆ, ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…