ಕಟೀಲು ಮೇಳದ ಪ್ರಧಾನ ಭಾಗವತ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದ ನಡುವೆಯೂ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪ್ರಸಾದ್ ಭಾಗವತರು ಯಕ್ಷಕಲಾಭಿಮಾನಿಗಳ ನೆಚ್ಚಿನ ಭಾಗವತರಾಗಿದ್ದರು. ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರರಾದ ಬಲಿಪ ಪ್ರಸಾದ್ ಅವರು, ರಕ್ತಗತವಾಗಿ ಬಂದಿದ್ದ ಯಕ್ಷಗಾನ ಭಾಗವತಿಕೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು. ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಮಿಂಚಿದ್ದರು. ತಂದೆ, ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…