ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಯಾವುದೇ ಸಿಬಂದಿಗಳು ಇರಲಿಲ್ಲ ಎನ್ನುವ ವಿಡಿಯೋ ವೈರಲ್ ಆಗುತ್ತಿದೆ. ವ್ಯಕ್ತಿಯೋರ್ವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.
ಬೆಳ್ಳಾರೆ ಆಸ್ಪತ್ರೆ ತೆರೆದಿದ್ದರೂ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿಗಳು ಇರಲಿಲ್ಲ ಎನ್ನುವುದು ವಿಡಿಯೋ ಸಾರಾಂಶ. ವೈದ್ಯರು, ಔಷಧಿ ವಿತರಕರು, ರಿಷೆಪ್ಸನ್ ಸಿಬ್ಬಂದಿ ಸೇರಿದಂತೆ ಯಾವುದೇ ಸಿಬ್ಬಂದಿ ಕಂಡುಬರಲಿಲ್ಲ. ಬೆಳಗ್ಗೆ 9.15 ಕ್ಕೆ ಔಷಧಿಗೆ ಆಗಮಿಸಿದ ಇಬ್ಬರು ರೋಗಿಗಳು ಇದ್ದರು, ವಿಡಿಯೋದಲ್ಲಿ ಅವರು ಬೆಳಗ್ಗೆ ಬಂದಿರುವುದನ್ನು ಖಚಿತಪಡಿಸುತ್ತಿದ್ದರು. ಆಸ್ಪತ್ರೆಯಲ್ಲಿ ಸಿಬಂದಿಗಳ ಕೊರತೆಯೋ ? ಆ ವಿಡಿಯೋ ಸಮಯದಲ್ಲಿ ಸಿಬಂದಿಗಳು ಇರಲಿಲ್ಲವೋ? ಎಂಬುದರ ಬಗ್ಗೆ ಈಗ ಚರ್ಚೆಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ ಅಗತ್ಯ ಎಂಬುದು ಸಾರ್ವಜನಿಕರ ಒತ್ತಾಯ. (ವೈರಲ್ ಆಗಿರುವ ವಿಡಿಯೋ ಇಲ್ಲಿದೆ )
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490