ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಯಾವುದೇ ಸಿಬಂದಿಗಳು ಇರಲಿಲ್ಲ ಎನ್ನುವ ವಿಡಿಯೋ ವೈರಲ್ ಆಗುತ್ತಿದೆ. ವ್ಯಕ್ತಿಯೋರ್ವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.
ಬೆಳ್ಳಾರೆ ಆಸ್ಪತ್ರೆ ತೆರೆದಿದ್ದರೂ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿಗಳು ಇರಲಿಲ್ಲ ಎನ್ನುವುದು ವಿಡಿಯೋ ಸಾರಾಂಶ. ವೈದ್ಯರು, ಔಷಧಿ ವಿತರಕರು, ರಿಷೆಪ್ಸನ್ ಸಿಬ್ಬಂದಿ ಸೇರಿದಂತೆ ಯಾವುದೇ ಸಿಬ್ಬಂದಿ ಕಂಡುಬರಲಿಲ್ಲ. ಬೆಳಗ್ಗೆ 9.15 ಕ್ಕೆ ಔಷಧಿಗೆ ಆಗಮಿಸಿದ ಇಬ್ಬರು ರೋಗಿಗಳು ಇದ್ದರು, ವಿಡಿಯೋದಲ್ಲಿ ಅವರು ಬೆಳಗ್ಗೆ ಬಂದಿರುವುದನ್ನು ಖಚಿತಪಡಿಸುತ್ತಿದ್ದರು. ಆಸ್ಪತ್ರೆಯಲ್ಲಿ ಸಿಬಂದಿಗಳ ಕೊರತೆಯೋ ? ಆ ವಿಡಿಯೋ ಸಮಯದಲ್ಲಿ ಸಿಬಂದಿಗಳು ಇರಲಿಲ್ಲವೋ? ಎಂಬುದರ ಬಗ್ಗೆ ಈಗ ಚರ್ಚೆಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ ಅಗತ್ಯ ಎಂಬುದು ಸಾರ್ವಜನಿಕರ ಒತ್ತಾಯ. (ವೈರಲ್ ಆಗಿರುವ ವಿಡಿಯೋ ಇಲ್ಲಿದೆ )
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…