ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಯಾವುದೇ ಸಿಬಂದಿಗಳು ಇರಲಿಲ್ಲ ಎನ್ನುವ ವಿಡಿಯೋ ವೈರಲ್ ಆಗುತ್ತಿದೆ. ವ್ಯಕ್ತಿಯೋರ್ವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.
ಬೆಳ್ಳಾರೆ ಆಸ್ಪತ್ರೆ ತೆರೆದಿದ್ದರೂ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿಗಳು ಇರಲಿಲ್ಲ ಎನ್ನುವುದು ವಿಡಿಯೋ ಸಾರಾಂಶ. ವೈದ್ಯರು, ಔಷಧಿ ವಿತರಕರು, ರಿಷೆಪ್ಸನ್ ಸಿಬ್ಬಂದಿ ಸೇರಿದಂತೆ ಯಾವುದೇ ಸಿಬ್ಬಂದಿ ಕಂಡುಬರಲಿಲ್ಲ. ಬೆಳಗ್ಗೆ 9.15 ಕ್ಕೆ ಔಷಧಿಗೆ ಆಗಮಿಸಿದ ಇಬ್ಬರು ರೋಗಿಗಳು ಇದ್ದರು, ವಿಡಿಯೋದಲ್ಲಿ ಅವರು ಬೆಳಗ್ಗೆ ಬಂದಿರುವುದನ್ನು ಖಚಿತಪಡಿಸುತ್ತಿದ್ದರು. ಆಸ್ಪತ್ರೆಯಲ್ಲಿ ಸಿಬಂದಿಗಳ ಕೊರತೆಯೋ ? ಆ ವಿಡಿಯೋ ಸಮಯದಲ್ಲಿ ಸಿಬಂದಿಗಳು ಇರಲಿಲ್ಲವೋ? ಎಂಬುದರ ಬಗ್ಗೆ ಈಗ ಚರ್ಚೆಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆ ಅಗತ್ಯ ಎಂಬುದು ಸಾರ್ವಜನಿಕರ ಒತ್ತಾಯ. (ವೈರಲ್ ಆಗಿರುವ ವಿಡಿಯೋ ಇಲ್ಲಿದೆ )
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…