ಮುಂಬರುವ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್

September 5, 2025
7:35 AM

ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ  ಶಿಫಾರಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆ  ಅನುಮೋದನೆ ನೀಡಿದೆ.

ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ತಿದ್ದುಪಡಿ ತರಲು, ನಿಯಮಾವಳಿ ರಚನೆ ಮಾಡಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.   ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಕೆಲವು ವರ್ಗಗಳ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವ ಕುರಿತಂತೆ  ವಿನಾಯಿತಿ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ.  65 ಕೋಟಿ ರೂಪಾಯಿ ಮೊತ್ತದ 25 ಎಕರೆ ಜಮೀನು ಖರೀದಿಸಲು ಸಂಪುಟ ನಿರ್ಧರಿಸಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ವಾರದ ಮೂರು ದಿನದ ಬದಲು ಐದು ದಿನಕ್ಕೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ
ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!
January 8, 2026
9:23 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror