ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿಯಾಗುತ್ತಿದೆ. ಕೆರೆಯಲ್ಲಿರುವ ಹೂಳೆತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಶನಿವಾರ ಸಂಜೆ ನಿಲ್ಲಿಸಿದ್ದ ಹಿಟಾಚಿ ಪಲ್ಟಿಯಾಗಿದೆ. ಟಿಪ್ಪರ್ ಆಪರೇಟರ್ ಕೆಲಸ ನಿಲ್ಲಿಸಿ ತೆರಳಿದ ವೇಳೆ ಮಣ್ಣು ಕುಸಿತವಾಗಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೋಗಾಯನಕೆರೆ ಅಭಿವೃದ್ಧಿಗೆ ಮುನ್ನ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಹೂಳು ತೆಗೆಯಲು ಕೆರೆಯ ಮಧ್ಯೆ ಮಣ್ಣು ಹಾಕಿ ಟಿಪ್ಪರ್ ಹಾಗೂ ಹಿಟಾಚಿ ಹೋಗುವಂತೆ ದಾರಿ ಮಾಡಲಾಗಿತ್ತು. ಶನಿವಾರವೂ ಈ ದಂಡೆಯ ಮೇಲೆ ತೆರಳಿದ ಹಿಟಾಚಿ ಕೆಲಸ ಮಾಡುತ್ತಿತ್ತು. ಸಂಜೆ ವೇಳೆ ಕೆಲಸ ನಿಲ್ಲಿಸಿದ ವೇಳೆ ಪಲ್ಟಿಯಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇಲ್ಲಿ ಕಾಮಗಾರಿ ಆರಂಭ ಮಾಡಿದ ನಂತರ ಎರಡನೇ ಬಾರಿ ಹಿಟಾಚಿ ಪಲ್ಟಿಯಾಗುತ್ತಿದೆ. ಹೂಳು ತುಂಬಿದ್ದ ಕೆರೆಯಲ್ಲಿ ಲಾರಿ ಓಡಾಟ, ಟಿಪ್ಪರ್ ಓಡಾಟ ಸವಾಲಿನ ಕೆಲಸವಾಗಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…