ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿಯಾಗುತ್ತಿದೆ. ಕೆರೆಯಲ್ಲಿರುವ ಹೂಳೆತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಶನಿವಾರ ಸಂಜೆ ನಿಲ್ಲಿಸಿದ್ದ ಹಿಟಾಚಿ ಪಲ್ಟಿಯಾಗಿದೆ. ಟಿಪ್ಪರ್ ಆಪರೇಟರ್ ಕೆಲಸ ನಿಲ್ಲಿಸಿ ತೆರಳಿದ ವೇಳೆ ಮಣ್ಣು ಕುಸಿತವಾಗಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೋಗಾಯನಕೆರೆ ಅಭಿವೃದ್ಧಿಗೆ ಮುನ್ನ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಹೂಳು ತೆಗೆಯಲು ಕೆರೆಯ ಮಧ್ಯೆ ಮಣ್ಣು ಹಾಕಿ ಟಿಪ್ಪರ್ ಹಾಗೂ ಹಿಟಾಚಿ ಹೋಗುವಂತೆ ದಾರಿ ಮಾಡಲಾಗಿತ್ತು. ಶನಿವಾರವೂ ಈ ದಂಡೆಯ ಮೇಲೆ ತೆರಳಿದ ಹಿಟಾಚಿ ಕೆಲಸ ಮಾಡುತ್ತಿತ್ತು. ಸಂಜೆ ವೇಳೆ ಕೆಲಸ ನಿಲ್ಲಿಸಿದ ವೇಳೆ ಪಲ್ಟಿಯಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇಲ್ಲಿ ಕಾಮಗಾರಿ ಆರಂಭ ಮಾಡಿದ ನಂತರ ಎರಡನೇ ಬಾರಿ ಹಿಟಾಚಿ ಪಲ್ಟಿಯಾಗುತ್ತಿದೆ. ಹೂಳು ತುಂಬಿದ್ದ ಕೆರೆಯಲ್ಲಿ ಲಾರಿ ಓಡಾಟ, ಟಿಪ್ಪರ್ ಓಡಾಟ ಸವಾಲಿನ ಕೆಲಸವಾಗಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…