ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬೋಗಾಯನಕೆರೆ ಅಭಿವೃದ್ಧಿಯಾಗುತ್ತಿದೆ. ಕೆರೆಯಲ್ಲಿರುವ ಹೂಳೆತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಶನಿವಾರ ಸಂಜೆ ನಿಲ್ಲಿಸಿದ್ದ ಹಿಟಾಚಿ ಪಲ್ಟಿಯಾಗಿದೆ. ಟಿಪ್ಪರ್ ಆಪರೇಟರ್ ಕೆಲಸ ನಿಲ್ಲಿಸಿ ತೆರಳಿದ ವೇಳೆ ಮಣ್ಣು ಕುಸಿತವಾಗಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೋಗಾಯನಕೆರೆ ಅಭಿವೃದ್ಧಿಗೆ ಮುನ್ನ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಈ ಸಂದರ್ಭ ಹೂಳು ತೆಗೆಯಲು ಕೆರೆಯ ಮಧ್ಯೆ ಮಣ್ಣು ಹಾಕಿ ಟಿಪ್ಪರ್ ಹಾಗೂ ಹಿಟಾಚಿ ಹೋಗುವಂತೆ ದಾರಿ ಮಾಡಲಾಗಿತ್ತು. ಶನಿವಾರವೂ ಈ ದಂಡೆಯ ಮೇಲೆ ತೆರಳಿದ ಹಿಟಾಚಿ ಕೆಲಸ ಮಾಡುತ್ತಿತ್ತು. ಸಂಜೆ ವೇಳೆ ಕೆಲಸ ನಿಲ್ಲಿಸಿದ ವೇಳೆ ಪಲ್ಟಿಯಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇಲ್ಲಿ ಕಾಮಗಾರಿ ಆರಂಭ ಮಾಡಿದ ನಂತರ ಎರಡನೇ ಬಾರಿ ಹಿಟಾಚಿ ಪಲ್ಟಿಯಾಗುತ್ತಿದೆ. ಹೂಳು ತುಂಬಿದ್ದ ಕೆರೆಯಲ್ಲಿ ಲಾರಿ ಓಡಾಟ, ಟಿಪ್ಪರ್ ಓಡಾಟ ಸವಾಲಿನ ಕೆಲಸವಾಗಿದೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…