ಸೆ. 26 | ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವ

September 25, 2022
3:37 PM

ಇತಿಹಾಸ ಪ್ರಸಿದ್ಧ , ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಗಳು ಸೆ. 26ರಿಂದ ಅ. 5ರ ತನಕ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ಸಂಪೂರ್ಣ ಶಿಲಾಮಯವಾದ ಈ ದೇವಸ್ಥಾನ ಜೀರ್ಣೋದ್ಧಾರದ ಬಳಿಕ ಪ್ರತೀ ವರ್ಷ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಸೆ. 26ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜೆ, ಹರಿವಾಣ ಪೂಜೆ, ರಾತ್ರಿ ಹೂವಿನ ಪೂಜೆ, ಹರಿವಾಣ ಪೂಜೆ, ರಂಗಪೂಜೆ ನಡೆಯಲಿದೆ. ಸೆ. 29ರಂದು ಕದಿರು ತುಂಬಿಸುವುದು, ನವಾನ್ನ ನಡೆಯಲಿದೆ. ಸೆ. 30ರಂದು ಚಂಡಿಕಾ ಹೋಮ, ಅ. 2ರಂದು ಸಂಜೆ ಶಾರದಾ ಪೂಜೆ ಆರಂಭಗೊಳ್ಳಲಿದೆ. ಅ. 4 ರಂದು ಮಹಾನವಮಿ, ಬೆಳಿಗ್ಗೆ 11 ರಿಂದ ಆಯುಧ ಪೂಜೆ ನಡೆಯಲಿದೆ. ಅ. 5 ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಪ್ಪಸೇವೆ, ಶ್ರೀ ನಾಗದೇವರು, ದೈವಗಳಿಗೆ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಹೂವಿನ ಪೂಜೆ, ಸಪ್ತಶತೀ ಪಾರಾಯಣ, ಮಧ್ಯಾಹ್ನ 11 ರಿಂದ ಅಕ್ಷರಾಭ್ಯಾಸ, ಮಹಾಪೂಜೆ, ರಾತ್ರಿ ಸಾಮೂಹಿಕ ರಂಗಪೂಜೆ, ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror