ಇತಿಹಾಸ ಪ್ರಸಿದ್ಧ , ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಗಳು ಸೆ. 26ರಿಂದ ಅ. 5ರ ತನಕ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ಸಂಪೂರ್ಣ ಶಿಲಾಮಯವಾದ ಈ ದೇವಸ್ಥಾನ ಜೀರ್ಣೋದ್ಧಾರದ ಬಳಿಕ ಪ್ರತೀ ವರ್ಷ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಸೆ. 26ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜೆ, ಹರಿವಾಣ ಪೂಜೆ, ರಾತ್ರಿ ಹೂವಿನ ಪೂಜೆ, ಹರಿವಾಣ ಪೂಜೆ, ರಂಗಪೂಜೆ ನಡೆಯಲಿದೆ. ಸೆ. 29ರಂದು ಕದಿರು ತುಂಬಿಸುವುದು, ನವಾನ್ನ ನಡೆಯಲಿದೆ. ಸೆ. 30ರಂದು ಚಂಡಿಕಾ ಹೋಮ, ಅ. 2ರಂದು ಸಂಜೆ ಶಾರದಾ ಪೂಜೆ ಆರಂಭಗೊಳ್ಳಲಿದೆ. ಅ. 4 ರಂದು ಮಹಾನವಮಿ, ಬೆಳಿಗ್ಗೆ 11 ರಿಂದ ಆಯುಧ ಪೂಜೆ ನಡೆಯಲಿದೆ. ಅ. 5 ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಪ್ಪಸೇವೆ, ಶ್ರೀ ನಾಗದೇವರು, ದೈವಗಳಿಗೆ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಹೂವಿನ ಪೂಜೆ, ಸಪ್ತಶತೀ ಪಾರಾಯಣ, ಮಧ್ಯಾಹ್ನ 11 ರಿಂದ ಅಕ್ಷರಾಭ್ಯಾಸ, ಮಹಾಪೂಜೆ, ರಾತ್ರಿ ಸಾಮೂಹಿಕ ರಂಗಪೂಜೆ, ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ನಡೆಯಲಿದೆ.ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…