Advertisement
ಧಾರ್ಮಿಕ

ಸೆ. 26 | ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವ

Share

ಇತಿಹಾಸ ಪ್ರಸಿದ್ಧ , ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಗಳು ಸೆ. 26ರಿಂದ ಅ. 5ರ ತನಕ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ಸಂಪೂರ್ಣ ಶಿಲಾಮಯವಾದ ಈ ದೇವಸ್ಥಾನ ಜೀರ್ಣೋದ್ಧಾರದ ಬಳಿಕ ಪ್ರತೀ ವರ್ಷ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಸೆ. 26ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜೆ, ಹರಿವಾಣ ಪೂಜೆ, ರಾತ್ರಿ ಹೂವಿನ ಪೂಜೆ, ಹರಿವಾಣ ಪೂಜೆ, ರಂಗಪೂಜೆ ನಡೆಯಲಿದೆ. ಸೆ. 29ರಂದು ಕದಿರು ತುಂಬಿಸುವುದು, ನವಾನ್ನ ನಡೆಯಲಿದೆ. ಸೆ. 30ರಂದು ಚಂಡಿಕಾ ಹೋಮ, ಅ. 2ರಂದು ಸಂಜೆ ಶಾರದಾ ಪೂಜೆ ಆರಂಭಗೊಳ್ಳಲಿದೆ. ಅ. 4 ರಂದು ಮಹಾನವಮಿ, ಬೆಳಿಗ್ಗೆ 11 ರಿಂದ ಆಯುಧ ಪೂಜೆ ನಡೆಯಲಿದೆ. ಅ. 5 ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಪ್ಪಸೇವೆ, ಶ್ರೀ ನಾಗದೇವರು, ದೈವಗಳಿಗೆ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಹೂವಿನ ಪೂಜೆ, ಸಪ್ತಶತೀ ಪಾರಾಯಣ, ಮಧ್ಯಾಹ್ನ 11 ರಿಂದ ಅಕ್ಷರಾಭ್ಯಾಸ, ಮಹಾಪೂಜೆ, ರಾತ್ರಿ ಸಾಮೂಹಿಕ ರಂಗಪೂಜೆ, ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

6 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

6 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

6 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

11 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago