Advertisement
ಧಾರ್ಮಿಕ

ಸೆ. 26 | ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವ

Share

ಇತಿಹಾಸ ಪ್ರಸಿದ್ಧ , ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಗಳು ಸೆ. 26ರಿಂದ ಅ. 5ರ ತನಕ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ಸಂಪೂರ್ಣ ಶಿಲಾಮಯವಾದ ಈ ದೇವಸ್ಥಾನ ಜೀರ್ಣೋದ್ಧಾರದ ಬಳಿಕ ಪ್ರತೀ ವರ್ಷ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಸೆ. 26ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜೆ, ಹರಿವಾಣ ಪೂಜೆ, ರಾತ್ರಿ ಹೂವಿನ ಪೂಜೆ, ಹರಿವಾಣ ಪೂಜೆ, ರಂಗಪೂಜೆ ನಡೆಯಲಿದೆ. ಸೆ. 29ರಂದು ಕದಿರು ತುಂಬಿಸುವುದು, ನವಾನ್ನ ನಡೆಯಲಿದೆ. ಸೆ. 30ರಂದು ಚಂಡಿಕಾ ಹೋಮ, ಅ. 2ರಂದು ಸಂಜೆ ಶಾರದಾ ಪೂಜೆ ಆರಂಭಗೊಳ್ಳಲಿದೆ. ಅ. 4 ರಂದು ಮಹಾನವಮಿ, ಬೆಳಿಗ್ಗೆ 11 ರಿಂದ ಆಯುಧ ಪೂಜೆ ನಡೆಯಲಿದೆ. ಅ. 5 ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಪ್ಪಸೇವೆ, ಶ್ರೀ ನಾಗದೇವರು, ದೈವಗಳಿಗೆ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಹೂವಿನ ಪೂಜೆ, ಸಪ್ತಶತೀ ಪಾರಾಯಣ, ಮಧ್ಯಾಹ್ನ 11 ರಿಂದ ಅಕ್ಷರಾಭ್ಯಾಸ, ಮಹಾಪೂಜೆ, ರಾತ್ರಿ ಸಾಮೂಹಿಕ ರಂಗಪೂಜೆ, ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

24 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago