ಇತಿಹಾಸ ಪ್ರಸಿದ್ಧ , ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಗಳು ಸೆ. 26ರಿಂದ ಅ. 5ರ ತನಕ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ಸಂಪೂರ್ಣ ಶಿಲಾಮಯವಾದ ಈ ದೇವಸ್ಥಾನ ಜೀರ್ಣೋದ್ಧಾರದ ಬಳಿಕ ಪ್ರತೀ ವರ್ಷ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಸೆ. 26ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜೆ, ಹರಿವಾಣ ಪೂಜೆ, ರಾತ್ರಿ ಹೂವಿನ ಪೂಜೆ, ಹರಿವಾಣ ಪೂಜೆ, ರಂಗಪೂಜೆ ನಡೆಯಲಿದೆ. ಸೆ. 29ರಂದು ಕದಿರು ತುಂಬಿಸುವುದು, ನವಾನ್ನ ನಡೆಯಲಿದೆ. ಸೆ. 30ರಂದು ಚಂಡಿಕಾ ಹೋಮ, ಅ. 2ರಂದು ಸಂಜೆ ಶಾರದಾ ಪೂಜೆ ಆರಂಭಗೊಳ್ಳಲಿದೆ. ಅ. 4 ರಂದು ಮಹಾನವಮಿ, ಬೆಳಿಗ್ಗೆ 11 ರಿಂದ ಆಯುಧ ಪೂಜೆ ನಡೆಯಲಿದೆ. ಅ. 5 ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಪ್ಪಸೇವೆ, ಶ್ರೀ ನಾಗದೇವರು, ದೈವಗಳಿಗೆ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಹೂವಿನ ಪೂಜೆ, ಸಪ್ತಶತೀ ಪಾರಾಯಣ, ಮಧ್ಯಾಹ್ನ 11 ರಿಂದ ಅಕ್ಷರಾಭ್ಯಾಸ, ಮಹಾಪೂಜೆ, ರಾತ್ರಿ ಸಾಮೂಹಿಕ ರಂಗಪೂಜೆ, ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ನಡೆಯಲಿದೆ.ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…