ಇತಿಹಾಸ ಪ್ರಸಿದ್ಧ , ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಗಳು ಸೆ. 26ರಿಂದ ಅ. 5ರ ತನಕ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದಲ್ಲಿರುವ ಇತಿಹಾಸ ಪ್ರಸಿದ್ಧ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ಸಂಪೂರ್ಣ ಶಿಲಾಮಯವಾದ ಈ ದೇವಸ್ಥಾನ ಜೀರ್ಣೋದ್ಧಾರದ ಬಳಿಕ ಪ್ರತೀ ವರ್ಷ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಸೆ. 26ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜೆ, ಹರಿವಾಣ ಪೂಜೆ, ರಾತ್ರಿ ಹೂವಿನ ಪೂಜೆ, ಹರಿವಾಣ ಪೂಜೆ, ರಂಗಪೂಜೆ ನಡೆಯಲಿದೆ. ಸೆ. 29ರಂದು ಕದಿರು ತುಂಬಿಸುವುದು, ನವಾನ್ನ ನಡೆಯಲಿದೆ. ಸೆ. 30ರಂದು ಚಂಡಿಕಾ ಹೋಮ, ಅ. 2ರಂದು ಸಂಜೆ ಶಾರದಾ ಪೂಜೆ ಆರಂಭಗೊಳ್ಳಲಿದೆ. ಅ. 4 ರಂದು ಮಹಾನವಮಿ, ಬೆಳಿಗ್ಗೆ 11 ರಿಂದ ಆಯುಧ ಪೂಜೆ ನಡೆಯಲಿದೆ. ಅ. 5 ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಪ್ಪಸೇವೆ, ಶ್ರೀ ನಾಗದೇವರು, ದೈವಗಳಿಗೆ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಹೂವಿನ ಪೂಜೆ, ಸಪ್ತಶತೀ ಪಾರಾಯಣ, ಮಧ್ಯಾಹ್ನ 11 ರಿಂದ ಅಕ್ಷರಾಭ್ಯಾಸ, ಮಹಾಪೂಜೆ, ರಾತ್ರಿ ಸಾಮೂಹಿಕ ರಂಗಪೂಜೆ, ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ ನಡೆಯಲಿದೆ.ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…