Advertisement
ಧಾರ್ಮಿಕ

ಇತಿಹಾಸ ಪ್ರಸಿದ್ಧ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರಾ ಸಂಭ್ರಮ | ಡಿ.30 ಬ್ರಹ್ಮರಥೋತ್ಸವ |

Share

ಇತಿಹಾಸ ಪ್ರಸಿದ್ಧ , ಶಿಲಾಮಯ ದೇಗುಲ  ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವ ಆರಂಭವಾಗಿದ್ದು ಡಿ.30 ರಂದು ಬ್ರಹ್ಮರಥೋತ್ಸವ ಹಾಗೂ ಡಿ.31  ರಂದು ದರ್ಶನ ಬಲಿ ನಡೆಯಲಿದೆ ಎಂದು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀವತ್ಸ ಎಂ ವಿ ಹಾಗೂ ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ ತಿಳಿಸಿದ್ದಾರೆ.

Advertisement
Advertisement

ಸಂಪೂರ್ಣ ಶಿಲಾಮಯವಾದ, ದಕ್ಷಿಣ ಭಾರತದ ಅಪರೂಪದ ಶಿಲಾಮಯ ದೇಗುಲ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವಗಳು ಆರಂಭಗೊಂಡಿದೆ. ಡಿ.27 ರಿಂದ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಉತ್ಸವಾದಿಗಳು ನಡೆದು ಡಿ. 28 ರಿಂದ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉತ್ಸವಗಳು ಆರಂಭಗೊಳ್ಳುತ್ತಿದೆ.

ಡಿ.28 ರಂದು ದೇವತಾ ಪ್ರಾರ್ಥನೆ, ಪ್ರಾಸಾದ ಶುದ್ಧಿ ಇತ್ಯಾದಿ ವೈದಿಕ ಕಾರ್ಯಗಳು ನಡೆದು ಡಿ.29 ರಂದು ಗಣಪತಿ ಹವನ, ನವಗ್ರಹ ಹವನ ಸಹಿತ ವೈದಿಕ ಕಾರ್ಯಕ್ರಮಗಳ ಬಳಿಕ ಡಿ.30 ರಂದು ಮಧ್ಯಾಹ್ನ ದೇವರು ರಥಾರೂಢರಾಗಿ ರಾತ್ರಿ 9.30 ಕ್ಕೆ ಬ್ರಹ್ಮರಥೋತ್ಸವ ಹಾಗೂ ಬಳ್ಪ ಬೆಡಿ, ಉತ್ಸವ ಬಲಿ, ಓಡುಬಲಿ ನಡೆಯಲಿದೆ. ಡಿ.31 ರಂದು ದರ್ಶನ ಬಲಿ ನಡೆದು ಸಂಜೆ ಅವಭ್ರತೋತ್ಸವ ನಡೆಯಲಿದೆ.

ಡಿ.30  ರಂದು ಸಂಜೆ 6 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನಾರ್ಚನೆ ನಡೆಯಲಿದೆ. ಸಿದ್ಧಿವಿನಾಯಕ ಸ್ಫೋಟ್ಸ್‌ ಕ್ಲಬ್‌ ಸಂಯೋಜಿಸುವ ಈ ಕಾರ್ಯಕ್ರಮದಲ್ಲಿ ಗಾನಸಾರಥಿ ಖ್ಯಾತಿ ಬನ್ಸಾಲೆ ರಾಘವೇಂದ್ರ ಆಚಾರ್ಯ, ಸ್ವರವಾರಿಧಿ ಖ್ಯಾತಿಯ ಕಾವ್ಯಶ್ರೀ ಅಜೇರು, ಯುವಭಾಗವತ ಪ್ರಶಾಂತ್‌ ರೈ ಪುತ್ತೂರು ಭಾಗವಹಿಸುವರು. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

3 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

4 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago