ಇತಿಹಾಸ ಪ್ರಸಿದ್ಧ , ಶಿಲಾಮಯ ದೇಗುಲ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವ ಆರಂಭವಾಗಿದ್ದು ಡಿ.30 ರಂದು ಬ್ರಹ್ಮರಥೋತ್ಸವ ಹಾಗೂ ಡಿ.31 ರಂದು ದರ್ಶನ ಬಲಿ ನಡೆಯಲಿದೆ ಎಂದು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀವತ್ಸ ಎಂ ವಿ ಹಾಗೂ ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ ತಿಳಿಸಿದ್ದಾರೆ.
ಸಂಪೂರ್ಣ ಶಿಲಾಮಯವಾದ, ದಕ್ಷಿಣ ಭಾರತದ ಅಪರೂಪದ ಶಿಲಾಮಯ ದೇಗುಲ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವಗಳು ಆರಂಭಗೊಂಡಿದೆ. ಡಿ.27 ರಿಂದ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಉತ್ಸವಾದಿಗಳು ನಡೆದು ಡಿ. 28 ರಿಂದ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಉತ್ಸವಗಳು ಆರಂಭಗೊಳ್ಳುತ್ತಿದೆ.
ಡಿ.28 ರಂದು ದೇವತಾ ಪ್ರಾರ್ಥನೆ, ಪ್ರಾಸಾದ ಶುದ್ಧಿ ಇತ್ಯಾದಿ ವೈದಿಕ ಕಾರ್ಯಗಳು ನಡೆದು ಡಿ.29 ರಂದು ಗಣಪತಿ ಹವನ, ನವಗ್ರಹ ಹವನ ಸಹಿತ ವೈದಿಕ ಕಾರ್ಯಕ್ರಮಗಳ ಬಳಿಕ ಡಿ.30 ರಂದು ಮಧ್ಯಾಹ್ನ ದೇವರು ರಥಾರೂಢರಾಗಿ ರಾತ್ರಿ 9.30 ಕ್ಕೆ ಬ್ರಹ್ಮರಥೋತ್ಸವ ಹಾಗೂ ಬಳ್ಪ ಬೆಡಿ, ಉತ್ಸವ ಬಲಿ, ಓಡುಬಲಿ ನಡೆಯಲಿದೆ. ಡಿ.31 ರಂದು ದರ್ಶನ ಬಲಿ ನಡೆದು ಸಂಜೆ ಅವಭ್ರತೋತ್ಸವ ನಡೆಯಲಿದೆ.
ಡಿ.30 ರಂದು ಸಂಜೆ 6 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನಾರ್ಚನೆ ನಡೆಯಲಿದೆ. ಸಿದ್ಧಿವಿನಾಯಕ ಸ್ಫೋಟ್ಸ್ ಕ್ಲಬ್ ಸಂಯೋಜಿಸುವ ಈ ಕಾರ್ಯಕ್ರಮದಲ್ಲಿ ಗಾನಸಾರಥಿ ಖ್ಯಾತಿ ಬನ್ಸಾಲೆ ರಾಘವೇಂದ್ರ ಆಚಾರ್ಯ, ಸ್ವರವಾರಿಧಿ ಖ್ಯಾತಿಯ ಕಾವ್ಯಶ್ರೀ ಅಜೇರು, ಯುವಭಾಗವತ ಪ್ರಶಾಂತ್ ರೈ ಪುತ್ತೂರು ಭಾಗವಹಿಸುವರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…