Advertisement
MIRROR FOCUS

ದೇಶದಾದ್ಯಂತ ಪಟಾಕಿ ಖರೀದಿ-ಮಾರಾಟ ನಿಷೇಧ | ದೀಪಾವಳಿಗೂ ಮುನ್ನ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

Share

ದೀಪಾವಳಿ(Deepavali) ಬೆಳಕಿನ ಹಬ್ಬ. ಹಣತೆ, ದೀಪದಲಂಕಾರ, ಸಿಹಿ ತಿಂಡಿ ಜೊತೆಗೆ ಪಟಾಕಿ ಇದ್ರೆನೇ ಹಬ್ಬಕ್ಕೊಂದು ಕಳೆ. ಆದರೆ ಪಟಾಕಿ ಅಂದ್ರೆ ಅದು ಪರಿಸರ ಮಾಲಿನ್ಯ(Environmental pollution) ಮಾಡುವ ವಸ್ತು. ಶಬ್ದ, ಅದರಿಂದ ಬಿಡುಗಡೆಯಾಗುವ ರಾಸಾಯನಿಕ(Chemical) ಎಲ್ಲವೂ ನಮ್ಮ ಪರಿಸರವನ್ನು ಹಾಳು ಮಾಡುತ್ತದೆ. ಹಾಗಾಗಿ ಪಟಾಕಿಯನ್ನು ನಿಷೇಧಿಸಬೇಕು ಅನ್ನೋದು ಪರಿಸರವಾದಿಗಳ ಬಹಳ ದಶಕಗಳ ಕೂಗು. ಅದರಂತೆ ದೀಪಾವಳಿ  ಮತ್ತು ಇತರ ಸಂದರ್ಭಗಳಲ್ಲಿ ಬೇರಿಯಂ ರಾಸಾಯನಿಕ ಒಳಗೊಂಡ ಪಟಾಕಿ (Fire Crackers Ban) ಸಿಡಿಸದಂತೆ ತನ್ನ ಆದೇಶಗಳನ್ನು ಅನುಸರಿಸುವಂತೆ ಸುಪ್ರೀಂ ಕೋರ್ಟ್(Supreme court)  ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.ಹಸಿರು ಪಟಾಕಿ ಸಿಡಿಸುವುದಕ್ಕೆ ಯಾವುದೇ ಅಡ್ಡಿ ಇಲ್ಲ.

ಈ ತೀರ್ಪು ಕೇವಲ ದೆಹಲಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯ ಎಂದು ತಿಳಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ಪೀಠವು ಪಟಾಕಿ ಸಿಡಿಸುವ ಕುರಿತು ಹಿಂದಿನ ಆದೇಶಗಳನ್ನು ಜಾರಿಗೊಳಿಸಲು ನಿರ್ದೇಶನ ಕೋರಿ ಸಲ್ಲಿಸಿದ್ದ ರಾಜಸ್ಥಾನ ರಾಜ್ಯದ ಅರ್ಜಿಗಳನ್ನು ಆಲಿಸಿದ ನಂತರ ಈ ತೀರ್ಪು ನೀಡಿದೆ. ದೇಶದಲ್ಲಿ ನಿಷೇಧಿತ ರಾಸಾಯನಿಕಗಳು ಮತ್ತು ಬೇರಿಯಂ ಲವಣಗಳಿರುವ ಪಟಾಕಿ ಮಾರಾಟ, ಖರೀದಿ ಮತ್ತು ಬಳಕೆಯನ್ನು ನಿಷೇಧಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ರಾಜಸ್ಥಾನದ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸಿ, ಈ ತೀರ್ಪು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಿದೆ.

ಇಡೀ ದೇಶಕ್ಕೆ ಅನ್ವಯ: ಪಟಾಕಿ ನಿಷೇಧಿಸುವ ನಮ್ಮ ಆದೇಶ ಇಡೀ ದೇಶಕ್ಕೆ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು, ” ನಮ್ಮ ಹಿಂದಿನ ಆದೇಶದಲ್ಲಿ, ನಾವು ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸುವ ವಿಷಯವನ್ನು ಸ್ಥಳೀಯ ಸರ್ಕಾರಕ್ಕೆ ಬಿಟ್ಟಿದ್ದೇವೆ. ಅಲ್ಲದೆ ಆಸ್ಪತ್ರೆಗಳಂತಹ ಆರೋಗ್ಯ ಸೂಕ್ಷ್ಮ ಸ್ಥಳಗಳಲ್ಲಿ ಪಟಾಕಿ ಸಿಡಿಸದಂತೆ ಹಾಗೂ ಪಟಾಕಿ ಸಿಡಿಸಲು ಸಮಯ ಮಿತಿಯನ್ನು ನಿಗದಿಪಡಿಸುವಂತೆ ಕೋರಲಾಗಿದೆ. ಎನ್‌ಸಿಆರ್‌ಗೆ ಒಳಪಡುವ ರಾಜಸ್ಥಾನದ ಪ್ರದೇಶಗಳಿಗೂ ದೆಹಲಿ-ಎನ್‌ಸಿಆರ್ ನಿಯಮಗಳು ಅನ್ವಯಿಸುತ್ತವೆ. ಅಂದರೆ ಅಲ್ಲಿಯೂ ಪಟಾಕಿ ಸಿಡಿಸುವುದಕ್ಕೆ ನಿಷೇಧವಿದೆ ಎಂದು ನ್ಯಾಯಾಲಯ ಹೇಳಿದೆ.

ಬೆಳೆ ತ್ಯಾಜ್ಯ ಸುಡುವುದಕ್ಕೆ ನಿಷೇಧ: ಇದೇ ಸಂದರ್ಭದಲ್ಲಿ ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ತ್ಯಾಜ್ಯವನ್ನು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಪ್ರತಿನಿಧಿಗಳು ಬುಧವಾರ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಮಾಲಿನ್ಯ ತಡೆಯುವುದು ಎಲ್ಲರ ಕರ್ತವ್ಯ : ಮಾಲಿನ್ಯ ತಡೆಯುವುದು ಕೇವಲ ನ್ಯಾಯಾಲಯದ ಕೆಲಸವಲ್ಲ. ಪಂಜಾಬ್‌ನಲ್ಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಕೊಳೆಗಳನ್ನು ಸುಡುವಂತಹ ವಿವಿಧ ಕಾರಣಗಳಿಂದ ಮಾಲಿನ್ಯದ ಮಟ್ಟವು ಹೆಚ್ಚುತ್ತಿದೆ ಎಂದು ಗಮನಿಸಿದ ನ್ಯಾಯಾಲಯ, ಮಾಲಿನ್ಯವನ್ನು ತಡೆಯುವುದು ಕೇವಲ ನ್ಯಾಯಾಲಯದ ಕೆಲಸವಲ್ಲ, ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿಶೇಷವಾಗಿ ಸರ್ಕಾರವು ಅತ್ಯುನ್ನತ ಹೊಣೆಗಾರಿಕೆಯನ್ನು ಹೊಂದಿದೆ ಎಂದು ತಿಳಿಸಿತು. ಗೋಧಿ ಹುಲ್ಲು ಸುಡುವುದನ್ನು ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಸೂಚನೆ ನೀಡಿದೆ. ನಾವು ಇದನ್ನು (ಹುಲ್ಲು ಸುಡುವುದು) ನಿಲ್ಲಿಸಬೇಕೆಂದು ಬಯಸುತ್ತೇವೆ. ನೀವು ಅದನ್ನು ಹೇಗೆ ಮಾಡುತ್ತೀರಿ ಎಂದು ನಮಗೆ ತಿಳಿದಿಲ್ಲ, ಇದು ನಿಮ್ಮ ಕೆಲಸ. ಆದರೆ ಅದನ್ನು ನಿಲ್ಲಿಸಬೇಕು. ತಕ್ಷಣ ಏನಾದರೂ ಮಾಡಿ ಎಂದು ಆದೇಶ ಹೊರಡಿಸಿದೆ.‌

The Supreme Court on Tuesday directed all states and Union Territories to comply with its orders not to burst fire crackers containing barium chemical during Deepavali and other occasions. 
This judgment is applicable not only to Delhi but to the entire country. A bench comprising Justices AS Bopanna and MM Sundaresh passed the order after hearing the pleas of the state of Rajasthan seeking a direction to implement earlier orders on bursting of firecrackers.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago