ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್ಸೆಟ್ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…
ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.