ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್ಸೆಟ್ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…