ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್ಸೆಟ್ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…