Advertisement
MIRROR FOCUS

ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |

Share

ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್‌ಸೆಟ್‌ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

13 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

13 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

21 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

22 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

1 day ago