Advertisement
MIRROR FOCUS

ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |

Share

ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್‌ಸೆಟ್‌ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

8 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

8 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago