ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್ಸೆಟ್ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…